ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…