ನಾಲ್ಕು ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ: ಬೀದಿನಾಯಿಗಳ ಹಾವಳಿಗೆ ಬೆದರಿದ ನಗರದ ಜನ: ಬೀದಿನಾಯಿಗಳ ಉಪಟಳ ತಪ್ಪಿಸುವಲ್ಲಿ ನಗರಸಭೆ ನಿರ್ಲಕ್ಷ್ಯ: ನಗರಸಭೆ ನಿರ್ಲಕ್ಷ್ಯ ಖಂಡಿಸಿದ ಜನ ಕಚೇರಿ ಬಳಿ ಧರಣಿ ಮಾಡುವ ಎಚ್ಚರಿಕೆ

ಮನೆ‌ ಬಳಿ‌ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ‌ ನಾಯಿಗಳು‌ ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ‌ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.

ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.

ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.

ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.

ನಗರದಲ್ಲಿ ಇತ್ತೀಚೆಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ, ನಿನ್ನೆ ಶಾಂತಿನಗರದಲ್ಲಿ 5 ಜನರಿಗೆ, ರೋಜಿಪುರದಲ್ಲಿ 10 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ , ಕಳೆದ ತಿಂಗಳು 800 ಜನರಿಗೆ ನಾಯಿ ಕಚ್ಟಿದ ಪ್ರಕರಣಗಳು ಪತ್ತೆಯಾಗಿದೆ, ಬೀದಿನಾಯಿಗಳ ಉಪಟಳದಿಂದ ಜನರು ಕಂಗಲಾಗಿದ್ದಾರೆ, ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದ್ದ ನಗರಸಭೆ ಅಧಿಕಾರಿಗಳು ಕೈಕಟ್ಟಿ ಕುಳಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೀದಿ ನಾಯಿಗಳನ್ನ ಹಿಡಿಯಲು ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲಾಗಿದೆ, ಆದರೆ ನಾಯಿ ಹಿಡಿಯುವ ಕೆಲಸ ಮಾತ್ರ ಪ್ರಾರಂಭವಾಗದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ.

ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

8 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

8 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

9 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

14 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

20 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago