ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…