ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…