ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…