ನಾಲ್ಕು ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ: ಬೀದಿನಾಯಿಗಳ ಹಾವಳಿಗೆ ಬೆದರಿದ ನಗರದ ಜನ: ಬೀದಿನಾಯಿಗಳ ಉಪಟಳ ತಪ್ಪಿಸುವಲ್ಲಿ ನಗರಸಭೆ ನಿರ್ಲಕ್ಷ್ಯ: ನಗರಸಭೆ ನಿರ್ಲಕ್ಷ್ಯ ಖಂಡಿಸಿದ ಜನ ಕಚೇರಿ ಬಳಿ ಧರಣಿ ಮಾಡುವ ಎಚ್ಚರಿಕೆ

ಮನೆ‌ ಬಳಿ‌ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ‌ ನಾಯಿಗಳು‌ ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ‌ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.

ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.

ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.

ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.

ನಗರದಲ್ಲಿ ಇತ್ತೀಚೆಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ, ನಿನ್ನೆ ಶಾಂತಿನಗರದಲ್ಲಿ 5 ಜನರಿಗೆ, ರೋಜಿಪುರದಲ್ಲಿ 10 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ , ಕಳೆದ ತಿಂಗಳು 800 ಜನರಿಗೆ ನಾಯಿ ಕಚ್ಟಿದ ಪ್ರಕರಣಗಳು ಪತ್ತೆಯಾಗಿದೆ, ಬೀದಿನಾಯಿಗಳ ಉಪಟಳದಿಂದ ಜನರು ಕಂಗಲಾಗಿದ್ದಾರೆ, ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದ್ದ ನಗರಸಭೆ ಅಧಿಕಾರಿಗಳು ಕೈಕಟ್ಟಿ ಕುಳಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೀದಿ ನಾಯಿಗಳನ್ನ ಹಿಡಿಯಲು ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲಾಗಿದೆ, ಆದರೆ ನಾಯಿ ಹಿಡಿಯುವ ಕೆಲಸ ಮಾತ್ರ ಪ್ರಾರಂಭವಾಗದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ.

ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

49 minutes ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

2 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

12 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

15 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

19 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago