ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…