ನಾಲ್ಕು ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ: ಬೀದಿನಾಯಿಗಳ ಹಾವಳಿಗೆ ಬೆದರಿದ ನಗರದ ಜನ: ಬೀದಿನಾಯಿಗಳ ಉಪಟಳ ತಪ್ಪಿಸುವಲ್ಲಿ ನಗರಸಭೆ ನಿರ್ಲಕ್ಷ್ಯ: ನಗರಸಭೆ ನಿರ್ಲಕ್ಷ್ಯ ಖಂಡಿಸಿದ ಜನ ಕಚೇರಿ ಬಳಿ ಧರಣಿ ಮಾಡುವ ಎಚ್ಚರಿಕೆ

ಮನೆ‌ ಬಳಿ‌ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ‌ ನಾಯಿಗಳು‌ ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ‌ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.

ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.

ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.

ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.

ನಗರದಲ್ಲಿ ಇತ್ತೀಚೆಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ, ನಿನ್ನೆ ಶಾಂತಿನಗರದಲ್ಲಿ 5 ಜನರಿಗೆ, ರೋಜಿಪುರದಲ್ಲಿ 10 ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ , ಕಳೆದ ತಿಂಗಳು 800 ಜನರಿಗೆ ನಾಯಿ ಕಚ್ಟಿದ ಪ್ರಕರಣಗಳು ಪತ್ತೆಯಾಗಿದೆ, ಬೀದಿನಾಯಿಗಳ ಉಪಟಳದಿಂದ ಜನರು ಕಂಗಲಾಗಿದ್ದಾರೆ, ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದ್ದ ನಗರಸಭೆ ಅಧಿಕಾರಿಗಳು ಕೈಕಟ್ಟಿ ಕುಳಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೀದಿ ನಾಯಿಗಳನ್ನ ಹಿಡಿಯಲು ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಕೊಡಲಾಗಿದೆ, ಆದರೆ ನಾಯಿ ಹಿಡಿಯುವ ಕೆಲಸ ಮಾತ್ರ ಪ್ರಾರಂಭವಾಗದಿರುವುದೇ ಈ ಅವಾಂತರಕ್ಕೆ ಕಾರಣವಾಗಿದೆ.

ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

6 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

8 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

13 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

14 hours ago