Categories: Crime

ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಕೊಡಗಿನ ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮ ಬಾಳುಗೋಡು ಎಂಬಲ್ಲಿ ನಾಲ್ವರನ್ನು ಮಂಡೆ ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಿ ದ್ದ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ ರೂ. 10ಸಾವಿರ ದಂಡವನ್ನು ವಿಧಿಸಿ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪಿ ತ್ತಿದೆ. ಮೂಲತಃ ಕೇರಳ ಮಾನಂದವಾಡಿಯ ಅತ್ತಿಮಾಲ ಕಾಲೋನಿಯ ನಿವಾಸಿ ಕೃಷ್ಣನ್ ಎಂಬುವವರ ಮಗ ಎ.ಕೆ. ಗಿರೀಶ್ ತನ್ನ ಈ ಅಮಾನುಷ ಕೃತ್ಯಕ್ಕಾಗಿ ಗಲ್ಲು ಶಿಕ್ಷೆ ಹಾಗೂ ದಂಡಕ್ಕೆ ಒಳಗಾದವನಾಗಿದ್ದಾನೆ.

ಬೇಗೂರು ಗ್ರಾಮ ಬಾಳುಗೋಡು ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಕರಿಯ, ಗೌರಿ (70 ವರ್ಷ ಮೇಲ್ಪಟ್ಟವರು) ನಾಗಿ (30) ಕಾವೇರಿ (7), ಗಿರೀಶ್ (38) ಇವರುಗಳು ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಇವರ ಪೈಕಿ ಆರೋಪಿ ಗಿರೀಶ್ ಎಂಬಾತ ನಾಗಿಯ ಮೂರನೇ ಗಂಡನಾಗಿದ್ದು, ಒಂದು ವರ್ಷದಿಂದ ಒಟ್ಟಿಗೆ ವಾಸವಾಗಿದ್ದರು. ನಾಗಿ ತನ್ನ ಎರಡನೇ ಗಂಡನಾದ ಸುಬ್ರಮಣಿ ಎಂಬಾತಾನೊಂದಿಗೆ ಪುನಃ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದಿಂದ ಗಿರೀಶ್ ದಿನಾಂಕ 27-03-2025 ರಂದು ರಾತ್ರಿ ಸಮಯದಲ್ಲಿ ಈ ವಿಚಾರವಾಗಿ ನಾಗಿಯೊಂದಿಗೆ ಜಗಳವಾಡಿ ಮಂಡೆ ಕತ್ತಿಯಿಂದ ದೇಹದ ವಿವಿಧ ಭಾಗಗಳಿಗೆ ಕಡಿದು ಕೊಲೆ ಮಾಡಿದ್ದ. ತಡೆಯಲು ಬಂದ ನಾಗಿಯ ಅಜ್ಜ ಕರಿಯ, ಅಜ್ಜಿ ಗೌರಿ ಹಾಗೂ ತನ್ನ ಮಲ ಮಗಳಾದ ಕಾವೇರಿ ಈ ಮೂವರನ್ನು ಕೂಡ ಮಂಡೆ ಕತ್ತಿಯಿಂದ ಬರ್ಭರವಾಗಿ ಕಡಿದು
ಹತ್ಯೆಗೈದಿದ್ದ.

ಹೀಗೆ ಒಟ್ಟು ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ 103(1) BNS Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ದಿನಾಂಕ 28-03-2025 ರಂದು ಅರೋಪಿ ಗಿರೀಶನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಹಾಗೂ ತನಿಖಾ ಸಹಾಯಕರಾದ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಮಜೀದ್ ಕೆ.ಎ. ಮತ್ತು ಹೇಮಲತಾ ರೈ ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 12-06-2025 ರಂದು ಆರೋಪಿ ಗಿರೀಶನ ವಿರುದ್ದ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಟರಾಜ್ ಎಸ್. ರವರು ಇಂದು ಆರೋಪಿ ಗಿರೀಶ್ ಗೆ ಗಲ್ಲು ಶಿಕ್ಷೆ ಹಾಗೂ ರೂ. 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದ ಸರ್ಕಾರಿ ಅಭಿಯೋಜಕರಾಗಿ ಯಾಸಿನ್ ಅಹಮ್ಮದ್ ಅವರು ವಾದ ಮಂಡಿಸಿದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

3 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

14 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

15 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

15 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

16 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

23 hours ago