Categories: Crime

ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಕೊಡಗಿನ ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮ ಬಾಳುಗೋಡು ಎಂಬಲ್ಲಿ ನಾಲ್ವರನ್ನು ಮಂಡೆ ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಿ ದ್ದ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ ರೂ. 10ಸಾವಿರ ದಂಡವನ್ನು ವಿಧಿಸಿ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪಿ ತ್ತಿದೆ. ಮೂಲತಃ ಕೇರಳ ಮಾನಂದವಾಡಿಯ ಅತ್ತಿಮಾಲ ಕಾಲೋನಿಯ ನಿವಾಸಿ ಕೃಷ್ಣನ್ ಎಂಬುವವರ ಮಗ ಎ.ಕೆ. ಗಿರೀಶ್ ತನ್ನ ಈ ಅಮಾನುಷ ಕೃತ್ಯಕ್ಕಾಗಿ ಗಲ್ಲು ಶಿಕ್ಷೆ ಹಾಗೂ ದಂಡಕ್ಕೆ ಒಳಗಾದವನಾಗಿದ್ದಾನೆ.

ಬೇಗೂರು ಗ್ರಾಮ ಬಾಳುಗೋಡು ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಕರಿಯ, ಗೌರಿ (70 ವರ್ಷ ಮೇಲ್ಪಟ್ಟವರು) ನಾಗಿ (30) ಕಾವೇರಿ (7), ಗಿರೀಶ್ (38) ಇವರುಗಳು ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಇವರ ಪೈಕಿ ಆರೋಪಿ ಗಿರೀಶ್ ಎಂಬಾತ ನಾಗಿಯ ಮೂರನೇ ಗಂಡನಾಗಿದ್ದು, ಒಂದು ವರ್ಷದಿಂದ ಒಟ್ಟಿಗೆ ವಾಸವಾಗಿದ್ದರು. ನಾಗಿ ತನ್ನ ಎರಡನೇ ಗಂಡನಾದ ಸುಬ್ರಮಣಿ ಎಂಬಾತಾನೊಂದಿಗೆ ಪುನಃ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದಿಂದ ಗಿರೀಶ್ ದಿನಾಂಕ 27-03-2025 ರಂದು ರಾತ್ರಿ ಸಮಯದಲ್ಲಿ ಈ ವಿಚಾರವಾಗಿ ನಾಗಿಯೊಂದಿಗೆ ಜಗಳವಾಡಿ ಮಂಡೆ ಕತ್ತಿಯಿಂದ ದೇಹದ ವಿವಿಧ ಭಾಗಗಳಿಗೆ ಕಡಿದು ಕೊಲೆ ಮಾಡಿದ್ದ. ತಡೆಯಲು ಬಂದ ನಾಗಿಯ ಅಜ್ಜ ಕರಿಯ, ಅಜ್ಜಿ ಗೌರಿ ಹಾಗೂ ತನ್ನ ಮಲ ಮಗಳಾದ ಕಾವೇರಿ ಈ ಮೂವರನ್ನು ಕೂಡ ಮಂಡೆ ಕತ್ತಿಯಿಂದ ಬರ್ಭರವಾಗಿ ಕಡಿದು
ಹತ್ಯೆಗೈದಿದ್ದ.

ಹೀಗೆ ಒಟ್ಟು ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ 103(1) BNS Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ದಿನಾಂಕ 28-03-2025 ರಂದು ಅರೋಪಿ ಗಿರೀಶನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಹಾಗೂ ತನಿಖಾ ಸಹಾಯಕರಾದ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಮಜೀದ್ ಕೆ.ಎ. ಮತ್ತು ಹೇಮಲತಾ ರೈ ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 12-06-2025 ರಂದು ಆರೋಪಿ ಗಿರೀಶನ ವಿರುದ್ದ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಟರಾಜ್ ಎಸ್. ರವರು ಇಂದು ಆರೋಪಿ ಗಿರೀಶ್ ಗೆ ಗಲ್ಲು ಶಿಕ್ಷೆ ಹಾಗೂ ರೂ. 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದ ಸರ್ಕಾರಿ ಅಭಿಯೋಜಕರಾಗಿ ಯಾಸಿನ್ ಅಹಮ್ಮದ್ ಅವರು ವಾದ ಮಂಡಿಸಿದ್ದರು.

Ramesh Babu

Journalist

Recent Posts

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

20 minutes ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

13 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

23 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

23 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago