ಕೊಡಗಿನ ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮ ಬಾಳುಗೋಡು ಎಂಬಲ್ಲಿ ನಾಲ್ವರನ್ನು ಮಂಡೆ ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಿ ದ್ದ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ ರೂ. 10ಸಾವಿರ ದಂಡವನ್ನು ವಿಧಿಸಿ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪಿ ತ್ತಿದೆ. ಮೂಲತಃ ಕೇರಳ ಮಾನಂದವಾಡಿಯ ಅತ್ತಿಮಾಲ ಕಾಲೋನಿಯ ನಿವಾಸಿ ಕೃಷ್ಣನ್ ಎಂಬುವವರ ಮಗ ಎ.ಕೆ. ಗಿರೀಶ್ ತನ್ನ ಈ ಅಮಾನುಷ ಕೃತ್ಯಕ್ಕಾಗಿ ಗಲ್ಲು ಶಿಕ್ಷೆ ಹಾಗೂ ದಂಡಕ್ಕೆ ಒಳಗಾದವನಾಗಿದ್ದಾನೆ.
ಬೇಗೂರು ಗ್ರಾಮ ಬಾಳುಗೋಡು ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಕರಿಯ, ಗೌರಿ (70 ವರ್ಷ ಮೇಲ್ಪಟ್ಟವರು) ನಾಗಿ (30) ಕಾವೇರಿ (7), ಗಿರೀಶ್ (38) ಇವರುಗಳು ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಇವರ ಪೈಕಿ ಆರೋಪಿ ಗಿರೀಶ್ ಎಂಬಾತ ನಾಗಿಯ ಮೂರನೇ ಗಂಡನಾಗಿದ್ದು, ಒಂದು ವರ್ಷದಿಂದ ಒಟ್ಟಿಗೆ ವಾಸವಾಗಿದ್ದರು. ನಾಗಿ ತನ್ನ ಎರಡನೇ ಗಂಡನಾದ ಸುಬ್ರಮಣಿ ಎಂಬಾತಾನೊಂದಿಗೆ ಪುನಃ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದಿಂದ ಗಿರೀಶ್ ದಿನಾಂಕ 27-03-2025 ರಂದು ರಾತ್ರಿ ಸಮಯದಲ್ಲಿ ಈ ವಿಚಾರವಾಗಿ ನಾಗಿಯೊಂದಿಗೆ ಜಗಳವಾಡಿ ಮಂಡೆ ಕತ್ತಿಯಿಂದ ದೇಹದ ವಿವಿಧ ಭಾಗಗಳಿಗೆ ಕಡಿದು ಕೊಲೆ ಮಾಡಿದ್ದ. ತಡೆಯಲು ಬಂದ ನಾಗಿಯ ಅಜ್ಜ ಕರಿಯ, ಅಜ್ಜಿ ಗೌರಿ ಹಾಗೂ ತನ್ನ ಮಲ ಮಗಳಾದ ಕಾವೇರಿ ಈ ಮೂವರನ್ನು ಕೂಡ ಮಂಡೆ ಕತ್ತಿಯಿಂದ ಬರ್ಭರವಾಗಿ ಕಡಿದು
ಹತ್ಯೆಗೈದಿದ್ದ.
ಹೀಗೆ ಒಟ್ಟು ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ 103(1) BNS Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ದಿನಾಂಕ 28-03-2025 ರಂದು ಅರೋಪಿ ಗಿರೀಶನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಹಾಗೂ ತನಿಖಾ ಸಹಾಯಕರಾದ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಮಜೀದ್ ಕೆ.ಎ. ಮತ್ತು ಹೇಮಲತಾ ರೈ ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 12-06-2025 ರಂದು ಆರೋಪಿ ಗಿರೀಶನ ವಿರುದ್ದ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಟರಾಜ್ ಎಸ್. ರವರು ಇಂದು ಆರೋಪಿ ಗಿರೀಶ್ ಗೆ ಗಲ್ಲು ಶಿಕ್ಷೆ ಹಾಗೂ ರೂ. 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದ ಸರ್ಕಾರಿ ಅಭಿಯೋಜಕರಾಗಿ ಯಾಸಿನ್ ಅಹಮ್ಮದ್ ಅವರು ವಾದ ಮಂಡಿಸಿದ್ದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…