Categories: Crime

ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಕೊಡಗಿನ ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮ ಬಾಳುಗೋಡು ಎಂಬಲ್ಲಿ ನಾಲ್ವರನ್ನು ಮಂಡೆ ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಿ ದ್ದ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ ರೂ. 10ಸಾವಿರ ದಂಡವನ್ನು ವಿಧಿಸಿ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪಿ ತ್ತಿದೆ. ಮೂಲತಃ ಕೇರಳ ಮಾನಂದವಾಡಿಯ ಅತ್ತಿಮಾಲ ಕಾಲೋನಿಯ ನಿವಾಸಿ ಕೃಷ್ಣನ್ ಎಂಬುವವರ ಮಗ ಎ.ಕೆ. ಗಿರೀಶ್ ತನ್ನ ಈ ಅಮಾನುಷ ಕೃತ್ಯಕ್ಕಾಗಿ ಗಲ್ಲು ಶಿಕ್ಷೆ ಹಾಗೂ ದಂಡಕ್ಕೆ ಒಳಗಾದವನಾಗಿದ್ದಾನೆ.

ಬೇಗೂರು ಗ್ರಾಮ ಬಾಳುಗೋಡು ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಕರಿಯ, ಗೌರಿ (70 ವರ್ಷ ಮೇಲ್ಪಟ್ಟವರು) ನಾಗಿ (30) ಕಾವೇರಿ (7), ಗಿರೀಶ್ (38) ಇವರುಗಳು ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಇವರ ಪೈಕಿ ಆರೋಪಿ ಗಿರೀಶ್ ಎಂಬಾತ ನಾಗಿಯ ಮೂರನೇ ಗಂಡನಾಗಿದ್ದು, ಒಂದು ವರ್ಷದಿಂದ ಒಟ್ಟಿಗೆ ವಾಸವಾಗಿದ್ದರು. ನಾಗಿ ತನ್ನ ಎರಡನೇ ಗಂಡನಾದ ಸುಬ್ರಮಣಿ ಎಂಬಾತಾನೊಂದಿಗೆ ಪುನಃ ಸಂಬಂಧ ಹೊಂದಿದ್ದಾಳೆ ಎಂಬ ಸಂಶಯದಿಂದ ಗಿರೀಶ್ ದಿನಾಂಕ 27-03-2025 ರಂದು ರಾತ್ರಿ ಸಮಯದಲ್ಲಿ ಈ ವಿಚಾರವಾಗಿ ನಾಗಿಯೊಂದಿಗೆ ಜಗಳವಾಡಿ ಮಂಡೆ ಕತ್ತಿಯಿಂದ ದೇಹದ ವಿವಿಧ ಭಾಗಗಳಿಗೆ ಕಡಿದು ಕೊಲೆ ಮಾಡಿದ್ದ. ತಡೆಯಲು ಬಂದ ನಾಗಿಯ ಅಜ್ಜ ಕರಿಯ, ಅಜ್ಜಿ ಗೌರಿ ಹಾಗೂ ತನ್ನ ಮಲ ಮಗಳಾದ ಕಾವೇರಿ ಈ ಮೂವರನ್ನು ಕೂಡ ಮಂಡೆ ಕತ್ತಿಯಿಂದ ಬರ್ಭರವಾಗಿ ಕಡಿದು
ಹತ್ಯೆಗೈದಿದ್ದ.

ಹೀಗೆ ಒಟ್ಟು ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವುದಾಗಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ 103(1) BNS Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ದಿನಾಂಕ 28-03-2025 ರಂದು ಅರೋಪಿ ಗಿರೀಶನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಹಾಗೂ ತನಿಖಾ ಸಹಾಯಕರಾದ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಮಜೀದ್ ಕೆ.ಎ. ಮತ್ತು ಹೇಮಲತಾ ರೈ ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ಕಛೇರಿಯ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 12-06-2025 ರಂದು ಆರೋಪಿ ಗಿರೀಶನ ವಿರುದ್ದ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಟರಾಜ್ ಎಸ್. ರವರು ಇಂದು ಆರೋಪಿ ಗಿರೀಶ್ ಗೆ ಗಲ್ಲು ಶಿಕ್ಷೆ ಹಾಗೂ ರೂ. 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದ ಸರ್ಕಾರಿ ಅಭಿಯೋಜಕರಾಗಿ ಯಾಸಿನ್ ಅಹಮ್ಮದ್ ಅವರು ವಾದ ಮಂಡಿಸಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

14 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

18 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago