ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆ. 14ರಂದು ಚುನಾವಣೆ ನಡೆಯಲಿದೆ.
ಅಂದು ಬೆಳಿಗ್ಗೆ 10ರಿಂದ 11ರವರೆಗೆ ಸಂಘದ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 11.30ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಗತ್ಯವಿದ್ದಲ್ಲಿ ಮಧ್ಯಾಹ್ನ 12ರಿಂದ 12.30ರವರೆಗೆ ರಹಸ್ಯ ಮತದಾನ ನಡೆಸಲಾಗುವುದು. ಬಳಿಕ ತಕ್ಷಣವೇ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಸಂಘದ 2026–2031ನೇ ಸಾಲಿನ ಆಡಳಿತ ಮಂಡಳಿಗೆ ಆ. 2ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಹೀಗಾಗಿ ನೂತನ ಆಡಳಿತ ಮಂಡಳಿಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಬಹುಮತ ಹೊಂದಿದೆ.
ಸಹಕಾರ ಸಂಘಗಳ ಕಾಯ್ದೆ–1960ರ ನಿಯಮಗಳನ್ವಯ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ವಕೀಲ ಹಾಗೂ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರತಾಪ್, ಮೈತ್ರಿಕೂಟದ ಸಂಘಟಿತ ಕಾರ್ಯವೈಖರಿ, ಕಾರ್ಯಕರ್ತರ ಪರಿಶ್ರಮ ಹಾಗೂ ರೈತರು ಮತ್ತು ಷೇರುದಾರರು ವ್ಯಕ್ತಪಡಿಸಿದ ವಿಶ್ವಾಸದಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗಿದೆ. ನೂತನ ಆಡಳಿತ ಮಂಡಳಿ ಸಂಘದ ಅಭಿವೃದ್ಧಿ, ಪಾರದರ್ಶಕ ಆಡಳಿತ ಹಾಗೂ ರೈತರ ಹಿತಾಸಕ್ತಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…
ಬೆಂಗಳೂರು ಗ್ರಾಮಾಂತರ: ನವೀಕರಿಸಲಾಗದ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಕೃಷಿ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜೈವಿಕ ಇಂಧನ…