ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.18ರ ಸೋಮವಾರ ಮಧ್ಯಾಹ್ನ 3:30ಕ್ಕೆ ಸರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ದೊಡ್ಡಬಳ್ಳಾಪುರ ನಗರದ ಕೆಸಿಪಿ ಸರ್ಕಲ್ ಬಳಿ ಇರುವ ಮಣಿಶಂಕರ್ ಕಲ್ಯಾಣ ಮಂಟಪದಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ……
ಶಾಂತಿ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ ಪಿ ರವಿ.ಪಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗಳು, ನಗರಸಭೆ ಪೌರಾಯುಕ್ತ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ಇರಲಿದ್ದಾರೆ.
ಶಾಂತಿ ಸಭೆಯಲ್ಲಿ ಹಬ್ಬ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವುದು ಹೇಗೆ, ಶಾಂತಿ-ಸೌಹಾರ್ದಯುತವಾಗಿ, ಪರಿಸರಕ್ಕೆ ಹಾಗೂ ಸಮಾಜಕ್ಕೆ ಹಾನಿಯಾಗದಂತೆ ಹಬ್ಬವನ್ನು ಹೇಗೆ ಆಚರಣೆ ಮಾಡಬೇಕು, ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಹಬ್ಬ ಆಚರಿಸುವ ಕುರಿತು ಮಾಹಿತಿ ನೀಡಲಾಗುವುದು.
ನಾಳೆ ನಡೆಯಲಿರುವ ಸಭೆಯಲ್ಲಿ ಸಮಸ್ತ ನಾಗರಿಕರು ಪಾಲ್ಗೊಂಡು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ನೀಡುವ ಕಾನೂನು ನಿಯಮಗಳ ಕುರಿತು ಮಾಹಿತಿ ಪಡೆದು ಹಬ್ಬ ಆಚರಣೆ ಸಂದರ್ಭದಲ್ಲಿ ಪಾಲನೆ ಮಾಡಬೇಕೆಂದು ಕೋರಲಾಗಿದೆ…..
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…