ನಾಳೆ(ಆ.7) ನಗರದಲ್ಲಿ ಸಂಚರಿಸಲಿರುವ ಕನ್ನಡ ಜ್ಯೋತಿ ರಥ

ದೊಡ್ಡಬಳ್ಳಾಪುರ ತಾಲ್ಲೂಕಿಗೆ ಕರ್ನಾಟಕ ಸಂಭ್ರಮ 50ರ  ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ  ಅಭಿಯಾನದ ಕನ್ನಡ ಜ್ಯೋತಿ ರಥ ಆ.7 ರಂದು ಬುಧವಾರ ಆಗಮಿಸಲಿದೆ. ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸುವ  ಕನ್ನಡ ರಥವನ್ನು ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ  ತಾಲ್ಲೂಕಿನ ಗಡಿಭಾಗದಲ್ಲಿ ಸ್ವಾಗತಿಸಲಾಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ  ಕನ್ನಡ ಜ್ಯೋತಿ ರಥ ತಾಲ್ಲೂಕಿನಲ್ಲಿ ಸಂಚರಿಸುವ ಬಗ್ಗೆ  ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡ ಜ್ಯೋತಿ ರಥದ  ಬಾಶೆಟ್ಟಹಳ್ಳಿಯಿಂದ ಪ್ರಾರಂಭವಾಗುತ್ತದೆ. ನಂತರ  ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್, ರಂಗಪ್ಪ ಸರ್ಕಲ್, ಅರಳುಮಲ್ಲಿಗೆ ಬಾಗಿಲು, ಎಂ.ಎಸ್.ವಿ ಶಾಲೆ,  ಕೊಂಗಾಡಿಯಪ್ಪ ಪ್ರೌಢಶಾಲೆ, ತಾಲ್ಲೂಕು ಕಚೇರಿ ವೃತ್ತ,  ಬಸವ ಭವನ ವರೆಗೆ ಸಂಚರಿಸಲಿದೆ ಎಂದರು.

ನಂತರ ದೊಡ್ಡಬಳ್ಳಾಪುರ ನಗರದಿಂದ ದೊಡ್ಡಬೆಳವಂಗಲ ಮೂಲಕ ಮಧುರೆ ಹೋಬಳಿಯ ಕನಸವಾಡಿಗೆ ತಲುಪುತ್ತದೆ. ಆ.8 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ  ಕನಸವಾಡಿಯಿಂದ ನೆಲಮಂಗಲ ತಾಲ್ಲೂಕಿಗೆ  ಬೀಳ್ಕೊಡಲಾಗುತ್ತದೆ ಎಂದರು.

ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿದ ನಿಮಿತ್ತ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರ ಕನ್ನಡ  ಜ್ಯೋತಿ ರಥದ ಮೆರವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ಕನ್ನಡಪರ ಸಂಘಟನೆಗಳು, ಕನ್ನಡಾಭಿಮಾನಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು  ಭಾಗವಹಿಸುವರು. ಮಹಿಳಾ ಸಂಘಗಳಿಂದ ಪೂರ್ಣ ಕುಂಭ ಸ್ವಾಗತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಕಲಾತಂಡಗಳು ಸಾಂಸ್ಕೃತಿಕ ಮೆರಗು ನೀಡಲಿವೆ ಎಂದರು.

ಪೂರ್ವ ಸಿದ್ದತಾ ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

7 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

7 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

8 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

9 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

11 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

18 hours ago