ನಾಳೆ(ಆ.7) ನಗರದಲ್ಲಿ ಸಂಚರಿಸಲಿರುವ ಕನ್ನಡ ಜ್ಯೋತಿ ರಥ

ದೊಡ್ಡಬಳ್ಳಾಪುರ ತಾಲ್ಲೂಕಿಗೆ ಕರ್ನಾಟಕ ಸಂಭ್ರಮ 50ರ  ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ  ಅಭಿಯಾನದ ಕನ್ನಡ ಜ್ಯೋತಿ ರಥ ಆ.7 ರಂದು ಬುಧವಾರ ಆಗಮಿಸಲಿದೆ. ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸುವ  ಕನ್ನಡ ರಥವನ್ನು ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ  ತಾಲ್ಲೂಕಿನ ಗಡಿಭಾಗದಲ್ಲಿ ಸ್ವಾಗತಿಸಲಾಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ  ಕನ್ನಡ ಜ್ಯೋತಿ ರಥ ತಾಲ್ಲೂಕಿನಲ್ಲಿ ಸಂಚರಿಸುವ ಬಗ್ಗೆ  ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡ ಜ್ಯೋತಿ ರಥದ  ಬಾಶೆಟ್ಟಹಳ್ಳಿಯಿಂದ ಪ್ರಾರಂಭವಾಗುತ್ತದೆ. ನಂತರ  ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್, ರಂಗಪ್ಪ ಸರ್ಕಲ್, ಅರಳುಮಲ್ಲಿಗೆ ಬಾಗಿಲು, ಎಂ.ಎಸ್.ವಿ ಶಾಲೆ,  ಕೊಂಗಾಡಿಯಪ್ಪ ಪ್ರೌಢಶಾಲೆ, ತಾಲ್ಲೂಕು ಕಚೇರಿ ವೃತ್ತ,  ಬಸವ ಭವನ ವರೆಗೆ ಸಂಚರಿಸಲಿದೆ ಎಂದರು.

ನಂತರ ದೊಡ್ಡಬಳ್ಳಾಪುರ ನಗರದಿಂದ ದೊಡ್ಡಬೆಳವಂಗಲ ಮೂಲಕ ಮಧುರೆ ಹೋಬಳಿಯ ಕನಸವಾಡಿಗೆ ತಲುಪುತ್ತದೆ. ಆ.8 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ  ಕನಸವಾಡಿಯಿಂದ ನೆಲಮಂಗಲ ತಾಲ್ಲೂಕಿಗೆ  ಬೀಳ್ಕೊಡಲಾಗುತ್ತದೆ ಎಂದರು.

ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿದ ನಿಮಿತ್ತ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರ ಕನ್ನಡ  ಜ್ಯೋತಿ ರಥದ ಮೆರವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ಕನ್ನಡಪರ ಸಂಘಟನೆಗಳು, ಕನ್ನಡಾಭಿಮಾನಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು  ಭಾಗವಹಿಸುವರು. ಮಹಿಳಾ ಸಂಘಗಳಿಂದ ಪೂರ್ಣ ಕುಂಭ ಸ್ವಾಗತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಕಲಾತಂಡಗಳು ಸಾಂಸ್ಕೃತಿಕ ಮೆರಗು ನೀಡಲಿವೆ ಎಂದರು.

ಪೂರ್ವ ಸಿದ್ದತಾ ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

7 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

18 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

19 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago