Categories: ಕೊಡಗು

ನಾಳೆ(ಜ.25) ಮಡಿಕೇರಿಯಲ್ಲಿ 12.26 ಕೋಟಿ ವೆಚ್ಚದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಶಂಕುಸ್ಥಾಪನೆ

ಸ್ಕಾಟ್‌ಲ್ಯಾಂಡ್‌ ಆಫ್‌ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ(ಜ.25) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ತಿಳಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನ ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ.

ಸ್ವಚ್ಚ ಆಕಾಶ (Clear Sky), ಹೆಚ್ಚಿನ ವಾಯಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನ ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್‌ನ ಪಂಗೋಂಗ್‌ ತ್ಸೋ ಸರೋವರ, ಗುಜರಾತ್‌ನ ರನ್‌ ಅಫ್‌ ಕಚ್‌, ಅಂಡಮಾನ್‌ ಮತ್ತು ನಿಕೋಬಾರ್‌ ನ ನೀಲ್‌ ದ್ವೀಪ ಹಾಗೂ ಮಹಾರಾಷ್ಟ್ರ ಜಿಲ್ಲೆ ಮಾಥೇರಾನ್ ನಂತೆಯೇ ಕೊಡಗು ಜಿಲ್ಲೆಯ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.

ಕೊಡಗು ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

5 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

5 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

8 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

10 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

12 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

17 hours ago