ಸ್ಕಾಟ್ಲ್ಯಾಂಡ್ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ(ಜ.25) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.
ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನ ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ.
ಸ್ವಚ್ಚ ಆಕಾಶ (Clear Sky), ಹೆಚ್ಚಿನ ವಾಯಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನ ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್ನ ಪಂಗೋಂಗ್ ತ್ಸೋ ಸರೋವರ, ಗುಜರಾತ್ನ ರನ್ ಅಫ್ ಕಚ್, ಅಂಡಮಾನ್ ಮತ್ತು ನಿಕೋಬಾರ್ ನ ನೀಲ್ ದ್ವೀಪ ಹಾಗೂ ಮಹಾರಾಷ್ಟ್ರ ಜಿಲ್ಲೆ ಮಾಥೇರಾನ್ ನಂತೆಯೇ ಕೊಡಗು ಜಿಲ್ಲೆಯ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.
ಕೊಡಗು ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…