Categories: ಕೊಡಗು

ನಾಳೆ(ಜ.25) ಮಡಿಕೇರಿಯಲ್ಲಿ 12.26 ಕೋಟಿ ವೆಚ್ಚದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಶಂಕುಸ್ಥಾಪನೆ

ಸ್ಕಾಟ್‌ಲ್ಯಾಂಡ್‌ ಆಫ್‌ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ(ಜ.25) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ತಿಳಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನ ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ.

ಸ್ವಚ್ಚ ಆಕಾಶ (Clear Sky), ಹೆಚ್ಚಿನ ವಾಯಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನ ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್‌ನ ಪಂಗೋಂಗ್‌ ತ್ಸೋ ಸರೋವರ, ಗುಜರಾತ್‌ನ ರನ್‌ ಅಫ್‌ ಕಚ್‌, ಅಂಡಮಾನ್‌ ಮತ್ತು ನಿಕೋಬಾರ್‌ ನ ನೀಲ್‌ ದ್ವೀಪ ಹಾಗೂ ಮಹಾರಾಷ್ಟ್ರ ಜಿಲ್ಲೆ ಮಾಥೇರಾನ್ ನಂತೆಯೇ ಕೊಡಗು ಜಿಲ್ಲೆಯ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.

ಕೊಡಗು ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

9 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

9 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

14 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago