ಸ್ಕಾಟ್ಲ್ಯಾಂಡ್ ಆಫ್ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ(ಜ.25) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.
ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನ ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ.
ಸ್ವಚ್ಚ ಆಕಾಶ (Clear Sky), ಹೆಚ್ಚಿನ ವಾಯಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನ ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್ನ ಪಂಗೋಂಗ್ ತ್ಸೋ ಸರೋವರ, ಗುಜರಾತ್ನ ರನ್ ಅಫ್ ಕಚ್, ಅಂಡಮಾನ್ ಮತ್ತು ನಿಕೋಬಾರ್ ನ ನೀಲ್ ದ್ವೀಪ ಹಾಗೂ ಮಹಾರಾಷ್ಟ್ರ ಜಿಲ್ಲೆ ಮಾಥೇರಾನ್ ನಂತೆಯೇ ಕೊಡಗು ಜಿಲ್ಲೆಯ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.
ಕೊಡಗು ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…