Categories: ಕೊಡಗು

ನಾಳೆ(ಜ.25) ಮಡಿಕೇರಿಯಲ್ಲಿ 12.26 ಕೋಟಿ ವೆಚ್ಚದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಶಂಕುಸ್ಥಾಪನೆ

ಸ್ಕಾಟ್‌ಲ್ಯಾಂಡ್‌ ಆಫ್‌ ಇಂಡಿಯಾ ಎಂದೇ ಕರೆಯಲ್ಪಡುವ ಮಡಿಕೇರಿಯಲ್ಲಿ ರಾತ್ರಿ ವೇಳೆ ಬೆಳಕಿನ ಅಡಚಣೆ ಬಹಳ ಕಡಿಮೆ. ಇದು ನಕ್ಷತ್ರಗಳು ಹಾಗೂ ಗ್ರಹಗಳ ವೀಕ್ಷಣೆಗೆ ಇರುವಂತಹ ಭಾರತ ದೇಶದ ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದ್ದು, ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸುಮಾರು 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅತ್ಯಾಧುನಿಕ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುವುದು. ಇದರ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಾಳೆ(ಜ.25) ನೆರವೇರಿಸಲಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ತಿಳಿಸಿದ್ದಾರೆ.

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಚುರಪಡಿಸುವ ಉದ್ದೇಶದಿಂದ ಹಾಗೂ ವಿಜ್ಞಾನದ ಶಿಕ್ಷಣ, ವೈಚಾರಿಕ ಚಿಂತನೆ ಮೂಡಿಸುವುದಕ್ಕೆ ಹಾಗೂ ಖಗೋಳ ವಿಜ್ಞಾನ ವಿಷಯಗಳನ್ನು ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳನ್ನ ನಮ್ಮ ಇಲಾಖೆಯ ವತಿಯಿಂದ ಸ್ಥಾಪಿಸಲಾಗುತ್ತಿದೆ.

ಸ್ವಚ್ಚ ಆಕಾಶ (Clear Sky), ಹೆಚ್ಚಿನ ವಾಯಮಾಲಿನ್ಯ ಹಾಗೂ ಬೆಳಕಿನ ಅಡಚಣೆ ಇಲ್ಲದೇ ಇರುವಂತಹ ರಾತ್ರಿ ನಕ್ಷತ್ರ ವೀಕ್ಷಣೆಗೆ ಉತ್ತಮ ವಾತಾವರಣ ಕಲ್ಪಿಸುವಂತಹ ಪರಿಸರವನ್ನ ಕೊಡಗು ಜಿಲ್ಲೆ ಹೊಂದಿದೆ. ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆ, ಲಡಾಖ್‌ನ ಪಂಗೋಂಗ್‌ ತ್ಸೋ ಸರೋವರ, ಗುಜರಾತ್‌ನ ರನ್‌ ಅಫ್‌ ಕಚ್‌, ಅಂಡಮಾನ್‌ ಮತ್ತು ನಿಕೋಬಾರ್‌ ನ ನೀಲ್‌ ದ್ವೀಪ ಹಾಗೂ ಮಹಾರಾಷ್ಟ್ರ ಜಿಲ್ಲೆ ಮಾಥೇರಾನ್ ನಂತೆಯೇ ಕೊಡಗು ಜಿಲ್ಲೆಯ ಅತ್ಯಂತ ಪ್ರಶಸ್ತವಾದ ಜಾಗ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.

ಕೊಡಗು ಜಿಲ್ಲೆಯಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ಇಂಬು ನೀಡುವ ಹಾಗೂ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

5 minutes ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

3 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

15 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

16 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

18 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

21 hours ago