ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ ಕ್ರೋಧಿನಾಮ ಸಂವತ್ಸರದ ಪುಷ್ಯ ಶುದ್ಧ ಷಷ್ಠಿ ಜ.5ರ ಭಾನುವಾರ ಮಧ್ಯಾಹ್ನ 12-10 ರಿಂದ 12-20 ಗಂಟೆಗೆ ಸಲ್ಲುವ ಶುಭ (ಮೀನ) ಲಗ್ನದಲ್ಲಿ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಜರುಗಲಿದೆ.
ಪ್ರತಿವರ್ಷದಂತೆ ಈ ವರ್ಷವೂ ಸಹ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ, ಯಶಸ್ವಿಯಾಗಿ, ಶ್ರದ್ಧಾಭಕ್ತಿಯಿಂದ ನೆರವೇರಿಸಲು ಈಗಾಗಲೇ ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ.
ಅದರಂತೆ ಭಕ್ತಾಧಿಗಳ ಸಂಚಾರಕ್ಕೆ ದೊಡ್ಡಬಳ್ಳಾಪುರ ಕೆಎಸ್ ಆರ್ ಟಿಸಿ ಘಟಕದ ವತಿಯಿಂದ ಸುಮಾರು 75 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ವಾಹನಗಳ ನಿಲುಗಡೆಗೆ ಮಾಕಳಿ ಕಡೆಯಿಂದ ಬರುವ ವಾಹನಗಳಿಗೆ ದೇವಸ್ಥಾನ ಹಿಂಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಂಟನಕುಂಟೆ, ಹಾಡೋನಹಳ್ಳಿ ಮಾರ್ಗವಾಗಿ ಬರುವ ವಾಹನಗಳಿಗೆ ಲಘುಮೇನಹಳ್ಳಿ ಗೇಟ್ ಸಮೀಪ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಅನುಮತಿ ಇರುವುದಿಲ್ಲ.
ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಅವಕಾಶ ಮಾಡಲಾಗಿದೆ.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…