ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ ಕ್ರೋಧಿನಾಮ ಸಂವತ್ಸರದ ಪುಷ್ಯ ಶುದ್ಧ ಷಷ್ಠಿ ಜ.5ರ ಭಾನುವಾರ ಮಧ್ಯಾಹ್ನ 12-10 ರಿಂದ 12-20 ಗಂಟೆಗೆ ಸಲ್ಲುವ ಶುಭ (ಮೀನ) ಲಗ್ನದಲ್ಲಿ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ ಜರುಗಲಿದೆ.
ಪ್ರತಿವರ್ಷದಂತೆ ಈ ವರ್ಷವೂ ಸಹ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ, ಯಶಸ್ವಿಯಾಗಿ, ಶ್ರದ್ಧಾಭಕ್ತಿಯಿಂದ ನೆರವೇರಿಸಲು ಈಗಾಗಲೇ ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ.
ಅದರಂತೆ ಭಕ್ತಾಧಿಗಳ ಸಂಚಾರಕ್ಕೆ ದೊಡ್ಡಬಳ್ಳಾಪುರ ಕೆಎಸ್ ಆರ್ ಟಿಸಿ ಘಟಕದ ವತಿಯಿಂದ ಸುಮಾರು 75 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ವಾಹನಗಳ ನಿಲುಗಡೆಗೆ ಮಾಕಳಿ ಕಡೆಯಿಂದ ಬರುವ ವಾಹನಗಳಿಗೆ ದೇವಸ್ಥಾನ ಹಿಂಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಂಟನಕುಂಟೆ, ಹಾಡೋನಹಳ್ಳಿ ಮಾರ್ಗವಾಗಿ ಬರುವ ವಾಹನಗಳಿಗೆ ಲಘುಮೇನಹಳ್ಳಿ ಗೇಟ್ ಸಮೀಪ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಅನುಮತಿ ಇರುವುದಿಲ್ಲ.
ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಅವಕಾಶ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…