ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠರು ಈ ಬಾರಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಕಳೆದ ಶನಿವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಆಗಮಿಸಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಪರ ಮತಯಾಚನೆ ಮಾಡಿದ್ದರು. ಇದೀಗ ಭಾನುವಾರದಂದು ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಪ್ರಚಾರ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11ಕ್ಕೆ ನಗರದ ನೆಲದಾಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.