ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.

ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.

ವೈದ್ಯರ ಮುಷ್ಕರಕ್ಕೆ ಕಾರಣವೇನು?

ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ.

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡದೇ ಇರುವುದು.

ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 03 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶವಿದ್ದಾಗ್ಯೂ ಸಹ ಉಲ್ಲಂಘಿಸಿ, 1973 ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡದೇ ಇರುವುದು.

ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಇದುವರೆವಿಗೂ ಪ್ರಕಟಿಸದೇ ಇರುವುದು.

ಇಲಾಖೆಯ ಎಲ್ಲಾ ವೃಂದದ ಯಾವುದೇ ಅಧಿಕಾರಿ-ನೌಕರರಿಗೆ ಕಳೆದ 05 ವರ್ಷಗಳಿಂದ ಮುಂಬಡ್ತಿಗಳನ್ನು ನೀಡದೇ ಇರುವುದು.

ನಿಯಮಗಳಲ್ಲಿ ಅವಕಾಶವಿದ್ದಾಗ್ಯೂ, ಸೇವಾನಿರತ ವೈದ್ಯರು, ಅಧಿಕಾರಿ-ನೌಕರರ ಉನ್ನತ ವ್ಯಾಸಂಗ/ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡದೇ ಇರುವುದು.

ಇಲಾಖೆಯ ವರ್ಗಾವಣೆ ಕಾಯಿದೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸದೇ ಅವೈಜ್ಞಾನಿಕವಾಗಿ ಕೌನ್ಸಿಲಿಂಗ್ ವರ್ಗಾವಣೆ ಮಾಡುತ್ತಿರುವುದು.

ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರ ಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್-ಕೇಡರ್ ಹುದ್ದೆಗಳಿಗೆ ನೇಮಕಾತಿ, ಮುಂಬಡ್ತಿ ಮತ್ತು ವರ್ಗಾವಣೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿ-ನೌಕರರನ್ನೇ ನಿಯೋಜಿಸುವುದು.

ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು.

ಗುತ್ತಿಗೆ ವೈದ್ಯರು-ನೌಕರರು ಹಾಗೂ ಎನ್.ಹೆಚ್.ಎಂ. ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡದೇ ಇರುವುದು.

ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆ ಅಡಿ ಕಾರ್ಯನಿರತ ಸುಮಾರು 6000 ನೌಕರರಿಗೆ ಹಲವಾರು ವರ್ಷಗಳಿಂದ 3-4 ತಿಂಗಳಿಗೊಮ್ಮೆ ವೇತನ ಭತ್ಯೆಗಳನ್ನು ನೀಡುತ್ತಿರುವುದು.

ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞವೈದ್ಯರು ಇತರೆ ಸಿಬ್ಬಂದಿಯವರಿಗೆ ಸಿ.ಜಿ.ಹೆಚ್.ಎಸ್/ಎ.ಐ.ಸಿ.ಟಿ.ಇ. (ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲಿ) ವೇತನ ನೀಡುವುದು ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.

ಮುಷ್ಕರದ ಭಾಗವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago