ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.
ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.
ವೈದ್ಯರ ಮುಷ್ಕರಕ್ಕೆ ಕಾರಣವೇನು?
ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡದೇ ಇರುವುದು.
ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 03 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶವಿದ್ದಾಗ್ಯೂ ಸಹ ಉಲ್ಲಂಘಿಸಿ, 1973 ರಿಂದ ಇಲ್ಲಿಯವರೆಗೆ ಆರೋಗ್ಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡದೇ ಇರುವುದು.
ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಇದುವರೆವಿಗೂ ಪ್ರಕಟಿಸದೇ ಇರುವುದು.
ಇಲಾಖೆಯ ಎಲ್ಲಾ ವೃಂದದ ಯಾವುದೇ ಅಧಿಕಾರಿ-ನೌಕರರಿಗೆ ಕಳೆದ 05 ವರ್ಷಗಳಿಂದ ಮುಂಬಡ್ತಿಗಳನ್ನು ನೀಡದೇ ಇರುವುದು.
ನಿಯಮಗಳಲ್ಲಿ ಅವಕಾಶವಿದ್ದಾಗ್ಯೂ, ಸೇವಾನಿರತ ವೈದ್ಯರು, ಅಧಿಕಾರಿ-ನೌಕರರ ಉನ್ನತ ವ್ಯಾಸಂಗ/ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡದೇ ಇರುವುದು.
ಇಲಾಖೆಯ ವರ್ಗಾವಣೆ ಕಾಯಿದೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸದೇ ಅವೈಜ್ಞಾನಿಕವಾಗಿ ಕೌನ್ಸಿಲಿಂಗ್ ವರ್ಗಾವಣೆ ಮಾಡುತ್ತಿರುವುದು.
ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರ ಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್-ಕೇಡರ್ ಹುದ್ದೆಗಳಿಗೆ ನೇಮಕಾತಿ, ಮುಂಬಡ್ತಿ ಮತ್ತು ವರ್ಗಾವಣೆಗಳಿಗೆ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿ-ನೌಕರರನ್ನೇ ನಿಯೋಜಿಸುವುದು.
ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು.
ಗುತ್ತಿಗೆ ವೈದ್ಯರು-ನೌಕರರು ಹಾಗೂ ಎನ್.ಹೆಚ್.ಎಂ. ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡದೇ ಇರುವುದು.
ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆ ಅಡಿ ಕಾರ್ಯನಿರತ ಸುಮಾರು 6000 ನೌಕರರಿಗೆ ಹಲವಾರು ವರ್ಷಗಳಿಂದ 3-4 ತಿಂಗಳಿಗೊಮ್ಮೆ ವೇತನ ಭತ್ಯೆಗಳನ್ನು ನೀಡುತ್ತಿರುವುದು.
ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಜ್ಞವೈದ್ಯರು ಇತರೆ ಸಿಬ್ಬಂದಿಯವರಿಗೆ ಸಿ.ಜಿ.ಹೆಚ್.ಎಸ್/ಎ.ಐ.ಸಿ.ಟಿ.ಇ. (ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲಿ) ವೇತನ ನೀಡುವುದು ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.
ಮುಷ್ಕರದ ಭಾಗವಾಗಿ ಮಾರ್ಚ್ 11ರಿಂದ ವೈದ್ಯರು ಮತ್ತು ಸಿಬ್ಬಂದಿ ಕಪ್ಪು ಪಟ್ಟಿಯನ್ನು ಧರಿಸಿ ಓಪಿಡಿ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…