ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಿಕೊಂಡಿದೆ.
ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.
ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.
ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…