ನಾಳೆಯಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ; ಬೆ.ಗ್ರಾ ಜಿಲ್ಲೆಯಲ್ಲಿ 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ; ಜಿಲ್ಲಾದ್ಯಂತ 58‌ ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ; ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ‌ ಸಿದ್ಧತೆ ನಡೆಸಿಕೊಂಡಿದೆ.

ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ‌ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.

ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.

ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 hour ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

7 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

9 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

12 hours ago