ನಾಳೆಯಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ; ಬೆ.ಗ್ರಾ ಜಿಲ್ಲೆಯಲ್ಲಿ 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ; ಜಿಲ್ಲಾದ್ಯಂತ 58‌ ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ; ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ‌ ಸಿದ್ಧತೆ ನಡೆಸಿಕೊಂಡಿದೆ.

ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ‌ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.

ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.

ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

11 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

13 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago