ನಾಳೆಯಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ; ಬೆ.ಗ್ರಾ ಜಿಲ್ಲೆಯಲ್ಲಿ 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ; ಜಿಲ್ಲಾದ್ಯಂತ 58‌ ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ; ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ‌ ಸಿದ್ಧತೆ ನಡೆಸಿಕೊಂಡಿದೆ.

ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ‌ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.

ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.

ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

9 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

18 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

24 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago