ನಾಳೆಯಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ; ಬೆ.ಗ್ರಾ ಜಿಲ್ಲೆಯಲ್ಲಿ 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ; ಜಿಲ್ಲಾದ್ಯಂತ 58‌ ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ; ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ

ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ‌ ಸಿದ್ಧತೆ ನಡೆಸಿಕೊಂಡಿದೆ.

ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ‌ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.

ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.

ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

9 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

15 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

18 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

22 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago