ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಟರ್ನಿಂಗ್ ಪಾಯಿಂಟ್. ಈಗಾಗಲೇ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಿಕೊಂಡಿದೆ.
ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದಾರೆ. ಇದರಲ್ಲಿ 7,218 ಮಂದಿ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಂತರವನ್ನು ಸೆಕ್ಷನ್ 144 ಕಾಯ್ದೆಯಂತೆ ನಿರ್ಭಂದಿತ ಸ್ಥಳ ಎಂದು ಗುರುತಿಸಲಾಗಿದ್ದು, ಪರೀಕ್ಷೆಗೆ ಸಂಬಂಧಪಡದವರು ಈ ಪ್ರದೇಶದಲ್ಲಿ ಪ್ರವೇಶ ಮಾಡುವಂತಿಲ್ಲ.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕ್ಯಾಮರಾ, ಪೀಠೋಪಕರಣ, ಕುಡಿಯುವ ನೀರು, ಪ್ರತ್ಯೇಕ ಶೌಚಾಲಯ, ವಿದ್ಯುತ್ ಸೇರಿದಂತೆ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ , ಕ್ಯಾಮರ, ಡಿಜಿಟಲ್ ಗಡಿಯಾರ ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೂ ರೊಟೇಷನ್ ಆಧಾರದ ಮೇಲೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ಬೇರೊಂದು ಕ್ಲಷ್ಟರ್ ನಿಂದ ನೇಮಕ ಮಾಡಲಾಗಿದ್ದು ಅವರವರ ಬೋಧನಾ ವಿಷಯದ ದಿನದಂದು ಪರೀಕ್ಷಾ ಕರ್ತವ್ಯದಿಂದ ಬಿಡುವು ನೀಡಲಾಗಿದೆ.
ವಿಕಲಚೇತನ ಮಕ್ಕಳಿಗೆ ಕೆಳ ಮಹಡಿಯಲ್ಲಿಯೇ ಆಸನ ವ್ಯವಸ್ಥೆ ಮಾಡಲಾಗಿದೆ. 60 ನಿಮಿಷಗಳ ಹೆಚ್ಚಿನ ಸಮಯಾವಕಾಶವನ್ನು ಕಲ್ಪಿಸಲಾಗಿದೆ. ಅಂದ ಮಕ್ಕಳಿಗೆ 2 ಭಾಷಾ ವಿಶಯಗಳಿಗೆ ವಿನಾಯಿತಿಯನ್ನು ಮತ್ತು ಗಣಿತ, ವಿಜ್ಞಾನ ವಿಷಯಗಳಿಗೆ ಬದಲು ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳನ್ನು ಪರ್ಯಾಯವಾಗಿ ಬರೆಯಲು ಅವಕಾಶ ನೀಡಲಾಗಿದೆ.
ಶಾಂತಿ, ಶಿಸ್ತು, ಸುವ್ಯವಸ್ಥಿತವಾಗಿ ಗೌಪ್ಯತೆ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…