Categories: ರಾಜ್ಯ

ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ? ಇಲ್ಲಿದೆ ಮಾಹಿತಿ…

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಗೆ ಮತದಾನ ಮುಕ್ತಾಯಗೊಂಡಿದ್ದು, ಮತ ಎಣಿಕೆ ಘಟ್ಟಕ್ಕೆ‌ ಬಂದಿದೆ. ನಾಳೆ(ಮೇ.13) ಈಗಾಗಲೇ ಗುರುತಿಸಿರುವ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಆಯಾ ಪಕ್ಷಗಳಿಂದ ಕಣಕ್ಕೆ ಇಳಿದಿದ್ದ ಅಭ್ಯರ್ಥಿಗಳಿಗೆ ಎದೆಯಲ್ಲಿ ಢವ ಢವ ಶುರುವಾಗಿದೆ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬಿತ್ಯಾದಿಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಅರೆಸೇನಾ ಪಡೆಗಳು ಸ್ಟ್ರಾಂಗ್ ರೂಮ್‌ಗಳಲ್ಲಿ ಕಾವಲು ಕಾಯುತ್ತಿದ್ದರೆ, ಮತ ಎಣಿಕೆ ಕೇಂದ್ರಗಳ ಆವರಣವನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್‌ಆರ್‌ಪಿ) ಪಡೆಯ ಸಿಬ್ಬಂದಿ ಮತ್ತು ನಗರ ಅಥವಾ ಜಿಲ್ಲಾ ಪೊಲೀಸರು ಮತ ಎಣಿಕೆ ಕೇಂದ್ರಗಳ ಪ್ರವೇಶ ದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಿಯೋಜಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರಗಳ ವಿವರ

1. ಯಾದಗಿರಿ -ಸರ್ಕಾರಿ ಪದವಿ ಪೂರ್ವ ಕಾಲೇಜು

2 ವಿಜಯಪುರ – ಸೈನಿಕ ಶಾಲೆ ಕ್ಯಾಂಪಸ್

3.ಚಾಮರಾಜನಗರ – ಸರ್ಕಾರಿ ಇಂಜಿನಿಯರ್ ಕಾಲೇಜು

4.ಹಾಸನ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಡೈರಿ ಸರ್ಕಲ್

5.ಮಂಡ್ಯ – ಮಂಡ್ಯ ವಿವಿ

6.ರಾಮನಗರ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ

7.ಬೆಂಗಳೂರು ಗ್ರಾಮಾಂತರ – ಅಕಾಶ್ ಇಂಟರ್ನ್ಯಾಷನಲ್ ಸ್ಕೂಲ್, ಪ್ರಸನ್ನಹಳ್ಳಿ, ದೇವನಹಳ್ಳಿ ಟೌನ್

8.ಬೆಂಗಳೂರು ನಗರ – ಸೈಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮತ್ತು ಪಿಯು ಕಾಲೇಜು, ಬೆಂಗಳೂರು

9.ಬಿಬಿಎಂಪಿ – ದಕ್ಷಿಣ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜು, ಜಯನಗರ

10.ಬಿಬಿಎಂಪಿ ಉತ್ತರ – ಮೌಂಟ್ ಕಾರ್ಮೆಲ್ ಪಿಯು ಕಾಲೇಜು

11.ಬಿಬಿಎಂಪಿ ಸೆಂಟ್ರಲ್ – ಬಿಎಂಎಸ್‌ ಮಹಿಳಾ ಕಾಲೇಜು, ಬಸವನಗುಡಿ

12.ಮೈಸೂರು- ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜು

13.ಕೊಡಗು – ಸೈಂಟ್ ಜೋಸೆಫ್‌ ಕಾನ್ವೆಂಟ್

14.ದಕ್ಷಿಣ ಕನ್ನಡ – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸುರತ್ಕಲ್

15.ಕೋಲಾರ – ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು

16.ಚಿಕ್ಕಮಗಳೂರು – ಐಡಿಎಸ್‌ಜಿ ಕಾಲೇಜು

17.ಉಡುಪಿ – ST.CECILY’s ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಬ್ರಹ್ಮಗಿರಿ, ಉಡುಪಿ

18.ಶಿವಮೊಗ್ಗ – ಸೈಹಾದ್ರಿ ಆರ್ಟ್ಸ್ ಕಾಲೇಜು

19.ಧಾರವಾಡ – ಕೃಷಿ ವಿಜ್ಞಾನ ವಿವಿ

20.ಗದಗ- ಶ್ರೀ ಜಗದ್ಗುರು ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು, ಗದಗ

21.ಕೊಪ್ಪಳ- ಶ್ರೀ ಗವಿಸಿದ್ದೇಶ್ವರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಕೊಪ್ಪಳ

22.ದಾವಣಗೆರೆ – ಶಿವಗಂಗೋತ್ರಿ ದಾವಣಗೆರೆ ವಿವಿ

23.ಚಿತ್ರದುರ್ಗ- ಸರ್ಕಾರಿ ವಿಜ್ಞಾನ ಕಾಲೇಜು

24.ಬಳ್ಳಾರಿ – ರಾವ್ ಬಹಾದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಬಳ್ಳಾರಿ

25.ವಿಜಯನಗರ – ಪ್ರೌಢದೇವರಾಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೊಸಪೇಟೆ

26.ಹಾವೇರಿ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ದೇವಗಿರಿ

27.ಉತ್ತರ ಕನ್ನಡ – ಡಾ. ಎ.ವಿ ಬಾಳಿಗಾ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು ಕುಮಟಾ

28.ರಾಯಚೂರು – ಎಲ್‌ ವಿ ಡಿ ಕಾಲೇಜು

29.ಬೀದರ್ – ಬಿವಿಬಿ ಕಾಲೇಜು, ಬೀದರ್

30.ಕಲಬುರಗಿ – ಗುಲ್ಬರ್ಗ ವಿ.ವಿ

31.ಚಿಕ್ಕಬಳ್ಳಾಪುರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿ ರಸ್ತೆ

32.ತುಮಕೂರು – ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಿಎಚ್ ರಸ್ತೆ / ತುಮಕೂರು ವಿವಿ ವಿಜ್ಞಾನ ಕಾಲೇಜು / ತುಮಕೂರು ವಿವಿ ಆರ್ಟ್‌ ಕಾಲೇಜು

33.ಬಾಗಲಕೋಟೆ – ತೋಟಗಾರಿಕಾ ವಿವಿ

34.ಬೆಳಗಾವಿ – ಆರ್‌ ಪಿ ಡಿ ಕಾಲೇಜು ಬೆಳಗಾವಿ

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

3 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

10 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

16 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago