Categories: ರಾಜ್ಯ

ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ? ಇಲ್ಲಿದೆ ಮಾಹಿತಿ…

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಗೆ ಮತದಾನ ಮುಕ್ತಾಯಗೊಂಡಿದ್ದು, ಮತ ಎಣಿಕೆ ಘಟ್ಟಕ್ಕೆ‌ ಬಂದಿದೆ. ನಾಳೆ(ಮೇ.13) ಈಗಾಗಲೇ ಗುರುತಿಸಿರುವ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಆಯಾ ಪಕ್ಷಗಳಿಂದ ಕಣಕ್ಕೆ ಇಳಿದಿದ್ದ ಅಭ್ಯರ್ಥಿಗಳಿಗೆ ಎದೆಯಲ್ಲಿ ಢವ ಢವ ಶುರುವಾಗಿದೆ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬಿತ್ಯಾದಿಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಅರೆಸೇನಾ ಪಡೆಗಳು ಸ್ಟ್ರಾಂಗ್ ರೂಮ್‌ಗಳಲ್ಲಿ ಕಾವಲು ಕಾಯುತ್ತಿದ್ದರೆ, ಮತ ಎಣಿಕೆ ಕೇಂದ್ರಗಳ ಆವರಣವನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್‌ಆರ್‌ಪಿ) ಪಡೆಯ ಸಿಬ್ಬಂದಿ ಮತ್ತು ನಗರ ಅಥವಾ ಜಿಲ್ಲಾ ಪೊಲೀಸರು ಮತ ಎಣಿಕೆ ಕೇಂದ್ರಗಳ ಪ್ರವೇಶ ದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಿಯೋಜಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರಗಳ ವಿವರ

1. ಯಾದಗಿರಿ -ಸರ್ಕಾರಿ ಪದವಿ ಪೂರ್ವ ಕಾಲೇಜು

2 ವಿಜಯಪುರ – ಸೈನಿಕ ಶಾಲೆ ಕ್ಯಾಂಪಸ್

3.ಚಾಮರಾಜನಗರ – ಸರ್ಕಾರಿ ಇಂಜಿನಿಯರ್ ಕಾಲೇಜು

4.ಹಾಸನ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಡೈರಿ ಸರ್ಕಲ್

5.ಮಂಡ್ಯ – ಮಂಡ್ಯ ವಿವಿ

6.ರಾಮನಗರ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ

7.ಬೆಂಗಳೂರು ಗ್ರಾಮಾಂತರ – ಅಕಾಶ್ ಇಂಟರ್ನ್ಯಾಷನಲ್ ಸ್ಕೂಲ್, ಪ್ರಸನ್ನಹಳ್ಳಿ, ದೇವನಹಳ್ಳಿ ಟೌನ್

8.ಬೆಂಗಳೂರು ನಗರ – ಸೈಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮತ್ತು ಪಿಯು ಕಾಲೇಜು, ಬೆಂಗಳೂರು

9.ಬಿಬಿಎಂಪಿ – ದಕ್ಷಿಣ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜು, ಜಯನಗರ

10.ಬಿಬಿಎಂಪಿ ಉತ್ತರ – ಮೌಂಟ್ ಕಾರ್ಮೆಲ್ ಪಿಯು ಕಾಲೇಜು

11.ಬಿಬಿಎಂಪಿ ಸೆಂಟ್ರಲ್ – ಬಿಎಂಎಸ್‌ ಮಹಿಳಾ ಕಾಲೇಜು, ಬಸವನಗುಡಿ

12.ಮೈಸೂರು- ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜು

13.ಕೊಡಗು – ಸೈಂಟ್ ಜೋಸೆಫ್‌ ಕಾನ್ವೆಂಟ್

14.ದಕ್ಷಿಣ ಕನ್ನಡ – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸುರತ್ಕಲ್

15.ಕೋಲಾರ – ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು

16.ಚಿಕ್ಕಮಗಳೂರು – ಐಡಿಎಸ್‌ಜಿ ಕಾಲೇಜು

17.ಉಡುಪಿ – ST.CECILY’s ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಬ್ರಹ್ಮಗಿರಿ, ಉಡುಪಿ

18.ಶಿವಮೊಗ್ಗ – ಸೈಹಾದ್ರಿ ಆರ್ಟ್ಸ್ ಕಾಲೇಜು

19.ಧಾರವಾಡ – ಕೃಷಿ ವಿಜ್ಞಾನ ವಿವಿ

20.ಗದಗ- ಶ್ರೀ ಜಗದ್ಗುರು ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು, ಗದಗ

21.ಕೊಪ್ಪಳ- ಶ್ರೀ ಗವಿಸಿದ್ದೇಶ್ವರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಕೊಪ್ಪಳ

22.ದಾವಣಗೆರೆ – ಶಿವಗಂಗೋತ್ರಿ ದಾವಣಗೆರೆ ವಿವಿ

23.ಚಿತ್ರದುರ್ಗ- ಸರ್ಕಾರಿ ವಿಜ್ಞಾನ ಕಾಲೇಜು

24.ಬಳ್ಳಾರಿ – ರಾವ್ ಬಹಾದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಬಳ್ಳಾರಿ

25.ವಿಜಯನಗರ – ಪ್ರೌಢದೇವರಾಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೊಸಪೇಟೆ

26.ಹಾವೇರಿ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ದೇವಗಿರಿ

27.ಉತ್ತರ ಕನ್ನಡ – ಡಾ. ಎ.ವಿ ಬಾಳಿಗಾ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು ಕುಮಟಾ

28.ರಾಯಚೂರು – ಎಲ್‌ ವಿ ಡಿ ಕಾಲೇಜು

29.ಬೀದರ್ – ಬಿವಿಬಿ ಕಾಲೇಜು, ಬೀದರ್

30.ಕಲಬುರಗಿ – ಗುಲ್ಬರ್ಗ ವಿ.ವಿ

31.ಚಿಕ್ಕಬಳ್ಳಾಪುರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿ ರಸ್ತೆ

32.ತುಮಕೂರು – ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಿಎಚ್ ರಸ್ತೆ / ತುಮಕೂರು ವಿವಿ ವಿಜ್ಞಾನ ಕಾಲೇಜು / ತುಮಕೂರು ವಿವಿ ಆರ್ಟ್‌ ಕಾಲೇಜು

33.ಬಾಗಲಕೋಟೆ – ತೋಟಗಾರಿಕಾ ವಿವಿ

34.ಬೆಳಗಾವಿ – ಆರ್‌ ಪಿ ಡಿ ಕಾಲೇಜು ಬೆಳಗಾವಿ

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

54 minutes ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

12 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

13 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

21 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago