Categories: ರಾಜ್ಯ

ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ? ಇಲ್ಲಿದೆ ಮಾಹಿತಿ…

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಗೆ ಮತದಾನ ಮುಕ್ತಾಯಗೊಂಡಿದ್ದು, ಮತ ಎಣಿಕೆ ಘಟ್ಟಕ್ಕೆ‌ ಬಂದಿದೆ. ನಾಳೆ(ಮೇ.13) ಈಗಾಗಲೇ ಗುರುತಿಸಿರುವ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಆಯಾ ಪಕ್ಷಗಳಿಂದ ಕಣಕ್ಕೆ ಇಳಿದಿದ್ದ ಅಭ್ಯರ್ಥಿಗಳಿಗೆ ಎದೆಯಲ್ಲಿ ಢವ ಢವ ಶುರುವಾಗಿದೆ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬಿತ್ಯಾದಿಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಅರೆಸೇನಾ ಪಡೆಗಳು ಸ್ಟ್ರಾಂಗ್ ರೂಮ್‌ಗಳಲ್ಲಿ ಕಾವಲು ಕಾಯುತ್ತಿದ್ದರೆ, ಮತ ಎಣಿಕೆ ಕೇಂದ್ರಗಳ ಆವರಣವನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್‌ಆರ್‌ಪಿ) ಪಡೆಯ ಸಿಬ್ಬಂದಿ ಮತ್ತು ನಗರ ಅಥವಾ ಜಿಲ್ಲಾ ಪೊಲೀಸರು ಮತ ಎಣಿಕೆ ಕೇಂದ್ರಗಳ ಪ್ರವೇಶ ದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಿಯೋಜಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರಗಳ ವಿವರ

1. ಯಾದಗಿರಿ -ಸರ್ಕಾರಿ ಪದವಿ ಪೂರ್ವ ಕಾಲೇಜು

2 ವಿಜಯಪುರ – ಸೈನಿಕ ಶಾಲೆ ಕ್ಯಾಂಪಸ್

3.ಚಾಮರಾಜನಗರ – ಸರ್ಕಾರಿ ಇಂಜಿನಿಯರ್ ಕಾಲೇಜು

4.ಹಾಸನ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಡೈರಿ ಸರ್ಕಲ್

5.ಮಂಡ್ಯ – ಮಂಡ್ಯ ವಿವಿ

6.ರಾಮನಗರ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ

7.ಬೆಂಗಳೂರು ಗ್ರಾಮಾಂತರ – ಅಕಾಶ್ ಇಂಟರ್ನ್ಯಾಷನಲ್ ಸ್ಕೂಲ್, ಪ್ರಸನ್ನಹಳ್ಳಿ, ದೇವನಹಳ್ಳಿ ಟೌನ್

8.ಬೆಂಗಳೂರು ನಗರ – ಸೈಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮತ್ತು ಪಿಯು ಕಾಲೇಜು, ಬೆಂಗಳೂರು

9.ಬಿಬಿಎಂಪಿ – ದಕ್ಷಿಣ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜು, ಜಯನಗರ

10.ಬಿಬಿಎಂಪಿ ಉತ್ತರ – ಮೌಂಟ್ ಕಾರ್ಮೆಲ್ ಪಿಯು ಕಾಲೇಜು

11.ಬಿಬಿಎಂಪಿ ಸೆಂಟ್ರಲ್ – ಬಿಎಂಎಸ್‌ ಮಹಿಳಾ ಕಾಲೇಜು, ಬಸವನಗುಡಿ

12.ಮೈಸೂರು- ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜು

13.ಕೊಡಗು – ಸೈಂಟ್ ಜೋಸೆಫ್‌ ಕಾನ್ವೆಂಟ್

14.ದಕ್ಷಿಣ ಕನ್ನಡ – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸುರತ್ಕಲ್

15.ಕೋಲಾರ – ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು

16.ಚಿಕ್ಕಮಗಳೂರು – ಐಡಿಎಸ್‌ಜಿ ಕಾಲೇಜು

17.ಉಡುಪಿ – ST.CECILY’s ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಬ್ರಹ್ಮಗಿರಿ, ಉಡುಪಿ

18.ಶಿವಮೊಗ್ಗ – ಸೈಹಾದ್ರಿ ಆರ್ಟ್ಸ್ ಕಾಲೇಜು

19.ಧಾರವಾಡ – ಕೃಷಿ ವಿಜ್ಞಾನ ವಿವಿ

20.ಗದಗ- ಶ್ರೀ ಜಗದ್ಗುರು ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು, ಗದಗ

21.ಕೊಪ್ಪಳ- ಶ್ರೀ ಗವಿಸಿದ್ದೇಶ್ವರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಕೊಪ್ಪಳ

22.ದಾವಣಗೆರೆ – ಶಿವಗಂಗೋತ್ರಿ ದಾವಣಗೆರೆ ವಿವಿ

23.ಚಿತ್ರದುರ್ಗ- ಸರ್ಕಾರಿ ವಿಜ್ಞಾನ ಕಾಲೇಜು

24.ಬಳ್ಳಾರಿ – ರಾವ್ ಬಹಾದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಬಳ್ಳಾರಿ

25.ವಿಜಯನಗರ – ಪ್ರೌಢದೇವರಾಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೊಸಪೇಟೆ

26.ಹಾವೇರಿ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ದೇವಗಿರಿ

27.ಉತ್ತರ ಕನ್ನಡ – ಡಾ. ಎ.ವಿ ಬಾಳಿಗಾ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು ಕುಮಟಾ

28.ರಾಯಚೂರು – ಎಲ್‌ ವಿ ಡಿ ಕಾಲೇಜು

29.ಬೀದರ್ – ಬಿವಿಬಿ ಕಾಲೇಜು, ಬೀದರ್

30.ಕಲಬುರಗಿ – ಗುಲ್ಬರ್ಗ ವಿ.ವಿ

31.ಚಿಕ್ಕಬಳ್ಳಾಪುರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿ ರಸ್ತೆ

32.ತುಮಕೂರು – ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಿಎಚ್ ರಸ್ತೆ / ತುಮಕೂರು ವಿವಿ ವಿಜ್ಞಾನ ಕಾಲೇಜು / ತುಮಕೂರು ವಿವಿ ಆರ್ಟ್‌ ಕಾಲೇಜು

33.ಬಾಗಲಕೋಟೆ – ತೋಟಗಾರಿಕಾ ವಿವಿ

34.ಬೆಳಗಾವಿ – ಆರ್‌ ಪಿ ಡಿ ಕಾಲೇಜು ಬೆಳಗಾವಿ

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago