Categories: ರಾಜ್ಯ

ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ? ಇಲ್ಲಿದೆ ಮಾಹಿತಿ…

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಗೆ ಮತದಾನ ಮುಕ್ತಾಯಗೊಂಡಿದ್ದು, ಮತ ಎಣಿಕೆ ಘಟ್ಟಕ್ಕೆ‌ ಬಂದಿದೆ. ನಾಳೆ(ಮೇ.13) ಈಗಾಗಲೇ ಗುರುತಿಸಿರುವ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಆಯಾ ಪಕ್ಷಗಳಿಂದ ಕಣಕ್ಕೆ ಇಳಿದಿದ್ದ ಅಭ್ಯರ್ಥಿಗಳಿಗೆ ಎದೆಯಲ್ಲಿ ಢವ ಢವ ಶುರುವಾಗಿದೆ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬಿತ್ಯಾದಿಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಅರೆಸೇನಾ ಪಡೆಗಳು ಸ್ಟ್ರಾಂಗ್ ರೂಮ್‌ಗಳಲ್ಲಿ ಕಾವಲು ಕಾಯುತ್ತಿದ್ದರೆ, ಮತ ಎಣಿಕೆ ಕೇಂದ್ರಗಳ ಆವರಣವನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್‌ಆರ್‌ಪಿ) ಪಡೆಯ ಸಿಬ್ಬಂದಿ ಮತ್ತು ನಗರ ಅಥವಾ ಜಿಲ್ಲಾ ಪೊಲೀಸರು ಮತ ಎಣಿಕೆ ಕೇಂದ್ರಗಳ ಪ್ರವೇಶ ದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಿಯೋಜಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರಗಳ ವಿವರ

1. ಯಾದಗಿರಿ -ಸರ್ಕಾರಿ ಪದವಿ ಪೂರ್ವ ಕಾಲೇಜು

2 ವಿಜಯಪುರ – ಸೈನಿಕ ಶಾಲೆ ಕ್ಯಾಂಪಸ್

3.ಚಾಮರಾಜನಗರ – ಸರ್ಕಾರಿ ಇಂಜಿನಿಯರ್ ಕಾಲೇಜು

4.ಹಾಸನ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಡೈರಿ ಸರ್ಕಲ್

5.ಮಂಡ್ಯ – ಮಂಡ್ಯ ವಿವಿ

6.ರಾಮನಗರ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ

7.ಬೆಂಗಳೂರು ಗ್ರಾಮಾಂತರ – ಅಕಾಶ್ ಇಂಟರ್ನ್ಯಾಷನಲ್ ಸ್ಕೂಲ್, ಪ್ರಸನ್ನಹಳ್ಳಿ, ದೇವನಹಳ್ಳಿ ಟೌನ್

8.ಬೆಂಗಳೂರು ನಗರ – ಸೈಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮತ್ತು ಪಿಯು ಕಾಲೇಜು, ಬೆಂಗಳೂರು

9.ಬಿಬಿಎಂಪಿ – ದಕ್ಷಿಣ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜು, ಜಯನಗರ

10.ಬಿಬಿಎಂಪಿ ಉತ್ತರ – ಮೌಂಟ್ ಕಾರ್ಮೆಲ್ ಪಿಯು ಕಾಲೇಜು

11.ಬಿಬಿಎಂಪಿ ಸೆಂಟ್ರಲ್ – ಬಿಎಂಎಸ್‌ ಮಹಿಳಾ ಕಾಲೇಜು, ಬಸವನಗುಡಿ

12.ಮೈಸೂರು- ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜು

13.ಕೊಡಗು – ಸೈಂಟ್ ಜೋಸೆಫ್‌ ಕಾನ್ವೆಂಟ್

14.ದಕ್ಷಿಣ ಕನ್ನಡ – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸುರತ್ಕಲ್

15.ಕೋಲಾರ – ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು

16.ಚಿಕ್ಕಮಗಳೂರು – ಐಡಿಎಸ್‌ಜಿ ಕಾಲೇಜು

17.ಉಡುಪಿ – ST.CECILY’s ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಬ್ರಹ್ಮಗಿರಿ, ಉಡುಪಿ

18.ಶಿವಮೊಗ್ಗ – ಸೈಹಾದ್ರಿ ಆರ್ಟ್ಸ್ ಕಾಲೇಜು

19.ಧಾರವಾಡ – ಕೃಷಿ ವಿಜ್ಞಾನ ವಿವಿ

20.ಗದಗ- ಶ್ರೀ ಜಗದ್ಗುರು ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು, ಗದಗ

21.ಕೊಪ್ಪಳ- ಶ್ರೀ ಗವಿಸಿದ್ದೇಶ್ವರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಕೊಪ್ಪಳ

22.ದಾವಣಗೆರೆ – ಶಿವಗಂಗೋತ್ರಿ ದಾವಣಗೆರೆ ವಿವಿ

23.ಚಿತ್ರದುರ್ಗ- ಸರ್ಕಾರಿ ವಿಜ್ಞಾನ ಕಾಲೇಜು

24.ಬಳ್ಳಾರಿ – ರಾವ್ ಬಹಾದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಬಳ್ಳಾರಿ

25.ವಿಜಯನಗರ – ಪ್ರೌಢದೇವರಾಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೊಸಪೇಟೆ

26.ಹಾವೇರಿ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ದೇವಗಿರಿ

27.ಉತ್ತರ ಕನ್ನಡ – ಡಾ. ಎ.ವಿ ಬಾಳಿಗಾ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು ಕುಮಟಾ

28.ರಾಯಚೂರು – ಎಲ್‌ ವಿ ಡಿ ಕಾಲೇಜು

29.ಬೀದರ್ – ಬಿವಿಬಿ ಕಾಲೇಜು, ಬೀದರ್

30.ಕಲಬುರಗಿ – ಗುಲ್ಬರ್ಗ ವಿ.ವಿ

31.ಚಿಕ್ಕಬಳ್ಳಾಪುರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿ ರಸ್ತೆ

32.ತುಮಕೂರು – ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಿಎಚ್ ರಸ್ತೆ / ತುಮಕೂರು ವಿವಿ ವಿಜ್ಞಾನ ಕಾಲೇಜು / ತುಮಕೂರು ವಿವಿ ಆರ್ಟ್‌ ಕಾಲೇಜು

33.ಬಾಗಲಕೋಟೆ – ತೋಟಗಾರಿಕಾ ವಿವಿ

34.ಬೆಳಗಾವಿ – ಆರ್‌ ಪಿ ಡಿ ಕಾಲೇಜು ಬೆಳಗಾವಿ

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

45 minutes ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

6 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

7 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

9 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

12 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

23 hours ago