Categories: ರಾಜ್ಯ

ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ: ಎಲ್ಲೆಲ್ಲಿ ಮತ ಎಣಿಕೆ ನಡೆಯಲಿದೆ? ಇಲ್ಲಿದೆ ಮಾಹಿತಿ…

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಗೆ ಮತದಾನ ಮುಕ್ತಾಯಗೊಂಡಿದ್ದು, ಮತ ಎಣಿಕೆ ಘಟ್ಟಕ್ಕೆ‌ ಬಂದಿದೆ. ನಾಳೆ(ಮೇ.13) ಈಗಾಗಲೇ ಗುರುತಿಸಿರುವ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ ನಡೆಸಲಾಗಿದೆ.

ಈಗಾಗಲೇ ಆಯಾ ಪಕ್ಷಗಳಿಂದ ಕಣಕ್ಕೆ ಇಳಿದಿದ್ದ ಅಭ್ಯರ್ಥಿಗಳಿಗೆ ಎದೆಯಲ್ಲಿ ಢವ ಢವ ಶುರುವಾಗಿದೆ. ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬಿತ್ಯಾದಿಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಅರೆಸೇನಾ ಪಡೆಗಳು ಸ್ಟ್ರಾಂಗ್ ರೂಮ್‌ಗಳಲ್ಲಿ ಕಾವಲು ಕಾಯುತ್ತಿದ್ದರೆ, ಮತ ಎಣಿಕೆ ಕೇಂದ್ರಗಳ ಆವರಣವನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್(ಕೆಎಸ್‌ಆರ್‌ಪಿ) ಪಡೆಯ ಸಿಬ್ಬಂದಿ ಮತ್ತು ನಗರ ಅಥವಾ ಜಿಲ್ಲಾ ಪೊಲೀಸರು ಮತ ಎಣಿಕೆ ಕೇಂದ್ರಗಳ ಪ್ರವೇಶ ದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಿಯೋಜಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರಗಳ ವಿವರ

1. ಯಾದಗಿರಿ -ಸರ್ಕಾರಿ ಪದವಿ ಪೂರ್ವ ಕಾಲೇಜು

2 ವಿಜಯಪುರ – ಸೈನಿಕ ಶಾಲೆ ಕ್ಯಾಂಪಸ್

3.ಚಾಮರಾಜನಗರ – ಸರ್ಕಾರಿ ಇಂಜಿನಿಯರ್ ಕಾಲೇಜು

4.ಹಾಸನ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಡೈರಿ ಸರ್ಕಲ್

5.ಮಂಡ್ಯ – ಮಂಡ್ಯ ವಿವಿ

6.ರಾಮನಗರ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ

7.ಬೆಂಗಳೂರು ಗ್ರಾಮಾಂತರ – ಅಕಾಶ್ ಇಂಟರ್ನ್ಯಾಷನಲ್ ಸ್ಕೂಲ್, ಪ್ರಸನ್ನಹಳ್ಳಿ, ದೇವನಹಳ್ಳಿ ಟೌನ್

8.ಬೆಂಗಳೂರು ನಗರ – ಸೈಂಟ್ ಜೋಸೆಫ್ಸ್ ಇಂಡಿಯನ್ ಹೈಸ್ಕೂಲ್ ಮತ್ತು ಪಿಯು ಕಾಲೇಜು, ಬೆಂಗಳೂರು

9.ಬಿಬಿಎಂಪಿ – ದಕ್ಷಿಣ ಎಸ್‌ಎಸ್‌ಎಂಆರ್‌ವಿ ಪಿಯು ಕಾಲೇಜು, ಜಯನಗರ

10.ಬಿಬಿಎಂಪಿ ಉತ್ತರ – ಮೌಂಟ್ ಕಾರ್ಮೆಲ್ ಪಿಯು ಕಾಲೇಜು

11.ಬಿಬಿಎಂಪಿ ಸೆಂಟ್ರಲ್ – ಬಿಎಂಎಸ್‌ ಮಹಿಳಾ ಕಾಲೇಜು, ಬಸವನಗುಡಿ

12.ಮೈಸೂರು- ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜು

13.ಕೊಡಗು – ಸೈಂಟ್ ಜೋಸೆಫ್‌ ಕಾನ್ವೆಂಟ್

14.ದಕ್ಷಿಣ ಕನ್ನಡ – ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸುರತ್ಕಲ್

15.ಕೋಲಾರ – ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು

16.ಚಿಕ್ಕಮಗಳೂರು – ಐಡಿಎಸ್‌ಜಿ ಕಾಲೇಜು

17.ಉಡುಪಿ – ST.CECILY’s ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಬ್ರಹ್ಮಗಿರಿ, ಉಡುಪಿ

18.ಶಿವಮೊಗ್ಗ – ಸೈಹಾದ್ರಿ ಆರ್ಟ್ಸ್ ಕಾಲೇಜು

19.ಧಾರವಾಡ – ಕೃಷಿ ವಿಜ್ಞಾನ ವಿವಿ

20.ಗದಗ- ಶ್ರೀ ಜಗದ್ಗುರು ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜು, ಗದಗ

21.ಕೊಪ್ಪಳ- ಶ್ರೀ ಗವಿಸಿದ್ದೇಶ್ವರ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಕೊಪ್ಪಳ

22.ದಾವಣಗೆರೆ – ಶಿವಗಂಗೋತ್ರಿ ದಾವಣಗೆರೆ ವಿವಿ

23.ಚಿತ್ರದುರ್ಗ- ಸರ್ಕಾರಿ ವಿಜ್ಞಾನ ಕಾಲೇಜು

24.ಬಳ್ಳಾರಿ – ರಾವ್ ಬಹಾದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಬಳ್ಳಾರಿ

25.ವಿಜಯನಗರ – ಪ್ರೌಢದೇವರಾಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೊಸಪೇಟೆ

26.ಹಾವೇರಿ – ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ದೇವಗಿರಿ

27.ಉತ್ತರ ಕನ್ನಡ – ಡಾ. ಎ.ವಿ ಬಾಳಿಗಾ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು ಕುಮಟಾ

28.ರಾಯಚೂರು – ಎಲ್‌ ವಿ ಡಿ ಕಾಲೇಜು

29.ಬೀದರ್ – ಬಿವಿಬಿ ಕಾಲೇಜು, ಬೀದರ್

30.ಕಲಬುರಗಿ – ಗುಲ್ಬರ್ಗ ವಿ.ವಿ

31.ಚಿಕ್ಕಬಳ್ಳಾಪುರ – ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿ ರಸ್ತೆ

32.ತುಮಕೂರು – ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಿಎಚ್ ರಸ್ತೆ / ತುಮಕೂರು ವಿವಿ ವಿಜ್ಞಾನ ಕಾಲೇಜು / ತುಮಕೂರು ವಿವಿ ಆರ್ಟ್‌ ಕಾಲೇಜು

33.ಬಾಗಲಕೋಟೆ – ತೋಟಗಾರಿಕಾ ವಿವಿ

34.ಬೆಳಗಾವಿ – ಆರ್‌ ಪಿ ಡಿ ಕಾಲೇಜು ಬೆಳಗಾವಿ

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago