ನಾಳೆ ರಾಷ್ಟ್ರಪಿತ ಮಾಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಸುಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು ಅ.1ರ ರಾತ್ರಿ 11-00 ಗಂಟೆಯಿಂದ ಅ.2ರ ರಾತ್ರಿ 12-00ಗಂಟೆಯವರೆಗೆ ನಿಷೇಧಿಸಿ ಆದೇಶಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.
ಈ ಹಿನ್ನೆಲೆ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ದೊಡ್ಡಬಳ್ಳಾಪುರ ನಗರಸಭೆ ಕೂಡ ಆದೇಶ ಹೊರಡಿಸಿದೆ.
ನಗರಸಭೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಈ ಬಾರಿ ಗಾಂಧಿ ಜಯಂತಿಯ ದಿನವೇ ಮಹಾಲಯ ಅಮಾವಾಸ್ಯೆ ಕೂಡ ಬಂದಿದ್ದು, ಅಂದು ಪ್ರಾಣಿವಧೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ನಗರಸಭೆ ಆದೇಶ ಹೊರಡಿಸಿವೆ. ಇದರಿಂದ ನಗರದಲ್ಲಿ ಚಿಕನ್, ಮಟನ್ ಸಿಗಲಾರದು. ಇದು ಹಬ್ಬದ ಮೂಡ್ನಲ್ಲಿದ್ದವರು ಮತ್ತು ವ್ಯಾಪಾರಿಗಳು ಕಂಗಲಾಗುವಂತೆ ಮಾಡಿದೆ.
ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್ದಾಸ್ ಕರಮಚಂದ್ ಗಾಂಧಿ ಜೀ ಅವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಆಚರಿಸಲಾಗುತ್ತದೆ.
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…