ನಾಳೆ ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಮದ್ಯ, ಮಾಂಸ ಮಾರಾಟ ನಿಷೇಧ

ನಾಳೆ ರಾಷ್ಟ್ರಪಿತ ಮಾಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಸುಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು ಅ.1ರ ರಾತ್ರಿ 11-00 ಗಂಟೆಯಿಂದ ಅ.2ರ ರಾತ್ರಿ 12-00ಗಂಟೆಯವರೆಗೆ ನಿಷೇಧಿಸಿ ಆದೇಶಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.

ಈ ಹಿನ್ನೆಲೆ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ದೊಡ್ಡಬಳ್ಳಾಪುರ ನಗರಸಭೆ‌ ಕೂಡ ಆದೇಶ ಹೊರಡಿಸಿದೆ.

ನಗರಸಭೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಬಾರಿ ಗಾಂಧಿ ಜಯಂತಿಯ ದಿನವೇ ಮಹಾಲಯ ಅಮಾವಾಸ್ಯೆ ಕೂಡ ಬಂದಿದ್ದು, ಅಂದು ಪ್ರಾಣಿವಧೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ನಗರಸಭೆ ಆದೇಶ ಹೊರಡಿಸಿವೆ. ಇದರಿಂದ ನಗರದಲ್ಲಿ ಚಿಕನ್, ಮಟನ್ ಸಿಗಲಾರದು. ಇದು ಹಬ್ಬದ ‌ಮೂಡ್​​​ನಲ್ಲಿದ್ದವರು ಮತ್ತು ವ್ಯಾಪಾರಿಗಳು ಕಂಗಲಾಗುವಂತೆ ಮಾಡಿದೆ.

ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್‌ದಾಸ್ ಕರಮಚಂದ್ ಗಾಂಧಿ ಜೀ ಅವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಆಚರಿಸಲಾಗುತ್ತದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

12 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

15 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

1 day ago