ನಾಳೆ ರಾಷ್ಟ್ರಪಿತ ಮಾಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಸುಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು ಅ.1ರ ರಾತ್ರಿ 11-00 ಗಂಟೆಯಿಂದ ಅ.2ರ ರಾತ್ರಿ 12-00ಗಂಟೆಯವರೆಗೆ ನಿಷೇಧಿಸಿ ಆದೇಶಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.
ಈ ಹಿನ್ನೆಲೆ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ದೊಡ್ಡಬಳ್ಳಾಪುರ ನಗರಸಭೆ ಕೂಡ ಆದೇಶ ಹೊರಡಿಸಿದೆ.
ನಗರಸಭೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಈ ಬಾರಿ ಗಾಂಧಿ ಜಯಂತಿಯ ದಿನವೇ ಮಹಾಲಯ ಅಮಾವಾಸ್ಯೆ ಕೂಡ ಬಂದಿದ್ದು, ಅಂದು ಪ್ರಾಣಿವಧೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಹಾಗೂ ನಗರಸಭೆ ಆದೇಶ ಹೊರಡಿಸಿವೆ. ಇದರಿಂದ ನಗರದಲ್ಲಿ ಚಿಕನ್, ಮಟನ್ ಸಿಗಲಾರದು. ಇದು ಹಬ್ಬದ ಮೂಡ್ನಲ್ಲಿದ್ದವರು ಮತ್ತು ವ್ಯಾಪಾರಿಗಳು ಕಂಗಲಾಗುವಂತೆ ಮಾಡಿದೆ.
ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್ದಾಸ್ ಕರಮಚಂದ್ ಗಾಂಧಿ ಜೀ ಅವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಆಚರಿಸಲಾಗುತ್ತದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…