ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಈ ಸಂದರ್ಭದಲ್ಲಿ, ನಾಗ ದೋಷ ನಿವಾರಣೆಗಾಗಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ನಾಗರ ಕಲ್ಲುಗಳಿಗೆ ಹಾಲು, ತುಪ್ಪ, ನೀರು ಎರೆದು ವಿಶೇಷ ಪೂಜೆ ಸಲ್ಲಿಸುತ್ತಾರೆ.
ನಾಳೆ ನಾಗರ ಪಂಚಮಿ ದಿನದಂದು ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಊಟದ ವ್ಯವಸ್ಥೆ, ಮಜ್ಜಿಗೆ, ಪಾನಕ ವ್ಯವಸ್ಥೆ ಮಾಡಲಾಗಿರುತ್ತದೆ.ದೇವರ ದರ್ಶನ ಮಾಡಲು ಬರುವ ವಿಶೇಷಚೇತನರು, ವೃದ್ಧರಿಗೆ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ
ನಾಗರಾಧನೆಗೆ ಹೆಸರುವಾಸಿಯಾದ ಪ್ರಸಿದ್ಧ ಕ್ಷೇತ್ರವಾಗಿದ್ದು, ನಾಗರ ಪಂಚಮಿ ಸಂದರ್ಭದಲ್ಲಿ ಇಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.
ಪೂಜಾ ವಿಧಾನ:
ಭಕ್ತರು ನಾಗರಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು, ಅರಿಶಿನ ಕುಂಕುಮ ಮತ್ತು ಹೂವುಗಳಿಂದ ಅಲಂಕರಿಸಿ, ಹಾಲೆರೆದು ಹರಕೆ ತೀರಿಸುತ್ತಾರೆ.
ನಂಬಿಕೆ:
ನಾಗರಕಲ್ಲಿಗೆ ತಣ್ಣೀರು ಎರೆದರೆ ಸರ್ಪದೋಷ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. ಇದು ಅಣ್ಣ-ತಂಗಿಯರ ಹಬ್ಬವೆಂದೂ ಪ್ರತೀತಿ ಕೂಡ ಇದೆ.
ಈ ಹಿನ್ನೆಲೆ ನಾಳೆ ನಾಗರ ಪಂಚಮಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜಿ.ಎನ್ ರಂಗಪ್ಪ, ಕೆ.ಎಸ್ ರವಿ, ಆರ್.ವಿ ಮಹೇಶ್ ಕುಮಾರ್, ಲಕ್ಷ್ಮಾ ನಾಯ್ಕ್, ಹೇಮಲತಾ ರಮೇಶ್ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…