ನಾಳೆ (ಜ.28) ನಗರ ಹಾಗೂ ಗ್ರಾಮಾಂತರದ ಹಲವೆಡೆ ವಿದ್ಯುತ್ ಪವರ್ ಕಟ್

ಜ.28ರಂದು ಕೆಐಡಿಬಿ ಹಾಗೂ ಅಪೆರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಈ ಮಾರ್ಗದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1,2,3, KSSIDC ಕೈಗಾರಿಕಾ ಪ್ರದೇಶ, ಮಜರಾಹೊಸಹಳ್ಳಿ ಗ್ರಾ.ಪಂ, ದೊಡ್ಡತುಮಕೂರು ಗ್ರಾ.ಪಂ, ಅರಳುಮಲ್ಲಿಗೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಆಡಚಣೆವಾಗಲಿದೆ.

ದೊಡ್ಡಬಳ್ಳಾಪುರ ನಗರದ ತೇರಿನಬೀದಿ ವೃತ್ತ, ಭುವನೇಶ್ವರಿ ನಗರ, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿ ನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸ್ ಭಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ, ಗುಡ್ಡದಹಳ್ಳಿ, ಮುತ್ತೂರು, ಸಿದ್ದೇನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago