ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ನಾಳೆ (ಜುಲೈ 5) ಲೋಕಾರ್ಪಣೆ ಮಾಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 14 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಸುಮಾರು ₹1.35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ ಸಾಕಾರಗೊಳ್ಳುತ್ತಿದೆ.

ಪ್ರತಿಮೆ ಅನಾವರಣದ ಬಳಿಕ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರುದುದ್ದನಹಳ್ಳಿ ಸಮೀಪದ ಶಿಕ್ಷಕರ ಬಡಾವಣೆಯಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಕೆ.ಎಚ್. ಮುನಿಯಪ್ಪ, ಸಂಸದರು, ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ನಾಲ್ಕು ತಾಲೂಕುಗಳ 102 ಗ್ರಾಮ ಪಂಚಾಯಿತಿಗಳಿಂದ ಡಾ. ಅಂಬೇಡ್ಕರ್ ಅವರ ಭಾವಚಿತ್ರ ಹೊಂದಿರುವ ಹೂವಿನ ಪಲ್ಲಕ್ಕಿಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.

ಸಿದ್ಧತೆ ಪರಿಶೀಲನೆ : ಕಾರ್ಯಕ್ರಮದ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಜಿಲ್ಲಾಧಿಕಾರಿ ಅನುರಾಧಾ, ಎಸ್ಪಿ ಚಂದ್ರಕಾಂತ್, ಮತ್ತು ಜಿ.ಪಂ. ಸಿಇಒ ವಾಸಂತಿ ಅಮರ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕಾರ್ಯಕ್ರಮದಲ್ಲಿ ಬೃಹತ್ ವೇದಿಕೆ, ವಾಹನ ನಿಲುಗಡೆ, ಕುಡಿಯುವ ನೀರು, ಉಪಹಾರ, ಆಹ್ವಾನಿತರಿಗೆ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕನ್ನಡಪರ, ದಲಿತಪರ, ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

6 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

12 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

13 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago