ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು ಮೂಡಿಸಲು ಡಿ.4ರಂದು ನಗರದಲ್ಲಿ ಸುರಕ್ಷತಾ ಜಾಥಾವನ್ನ ಹಮ್ಮಿಕೊಳ್ಳಲಾಗಿದೆ.
ಡಿ.4 ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ಕಚೇರಿಯಿಂದ ಡಿ ಕ್ರಾಸ್ ಮಾರ್ಗವಾಗಿ ಬೆಸ್ಕಾಂ ನಗರ ಉಪ ವಿಭಾಗ ಕಚೆರಿಯವರೆಗೆ ಗ್ರಾಹಕರ ಸುರಕ್ಷತಾ ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಬೆಸ್ಕಾಂ ನಗರ ಹಾಗೂ ಗ್ರಾಮೀಣ ಉಪ ವಿಭಾಗದ ಎಲ್ಲಾ ಶಾಖಾಧಿಕಾರಿಗಳು, ಕಂದಾಯ ಶಾಖೆಯ ಸಿಬ್ಬಂದಿ, ಹಾಗೂ ಎಲ್ಲಾ ಪವರ್ ಮೆನ್ ಗಳು, ಗ್ಯಾಂಗ್ ಮೆನ್ ಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು, ಪವರ್ ಮೆನ್ ಗಳು ಕಡ್ಡಾಯವಾಗಿ ಸಮವಸ್ತ್ರ ಮತ್ತು ಹೆಲ್ಮೆಟ್ ಗಳನ್ನು ಧರಿಸಿ ಹಾಜರಾಗಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…