ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು ಮೂಡಿಸಲು ಡಿ.4ರಂದು ನಗರದಲ್ಲಿ ಸುರಕ್ಷತಾ ಜಾಥಾವನ್ನ ಹಮ್ಮಿಕೊಳ್ಳಲಾಗಿದೆ.
ಡಿ.4 ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಬೆಸ್ಕಾಂ ಗ್ರಾಮೀಣ ಉಪ ವಿಭಾಗ ಕಚೇರಿಯಿಂದ ಡಿ ಕ್ರಾಸ್ ಮಾರ್ಗವಾಗಿ ಬೆಸ್ಕಾಂ ನಗರ ಉಪ ವಿಭಾಗ ಕಚೆರಿಯವರೆಗೆ ಗ್ರಾಹಕರ ಸುರಕ್ಷತಾ ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಬೆಸ್ಕಾಂ ನಗರ ಹಾಗೂ ಗ್ರಾಮೀಣ ಉಪ ವಿಭಾಗದ ಎಲ್ಲಾ ಶಾಖಾಧಿಕಾರಿಗಳು, ಕಂದಾಯ ಶಾಖೆಯ ಸಿಬ್ಬಂದಿ, ಹಾಗೂ ಎಲ್ಲಾ ಪವರ್ ಮೆನ್ ಗಳು, ಗ್ಯಾಂಗ್ ಮೆನ್ ಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು, ಪವರ್ ಮೆನ್ ಗಳು ಕಡ್ಡಾಯವಾಗಿ ಸಮವಸ್ತ್ರ ಮತ್ತು ಹೆಲ್ಮೆಟ್ ಗಳನ್ನು ಧರಿಸಿ ಹಾಜರಾಗಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…