ನಾಳೆ ದೊಡ್ಡಬಳ್ಳಾಪುರಕ್ಕೆ ಡಿ.ಕೆ ಸುರೇಶ್ ಆಗಮನ. ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ..

ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಭಾನುವಾರ(ನಾಳೆ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಸೋಮವಾರ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭಾನುವಾರ ಸಂಜೆ 4 ಗಂಟೆಗೆ ನಡೆಯಲಿರುವ ಅಧಿಕ ಹಾಲು ಕರೆಯುವ ಸ್ಪರ್ಧೆ ಕಾರ್ಯಕ್ರಮ ಉದ್ಘಾಟನೆಗೆ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಆಗಮಿಸುತ್ತಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ಎಂಎಲ್ಸಿ ಎಸ್ ರವಿ, ಬಮುಲ್ ಉಪಾಧ್ಯಕ್ಷ ರಾಜಣ್ಣ, ಮಾಜಿ ಶಾಸಕ ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಭಾಗಿಯಾಗಲಿದ್ದಾರೆ. ಅಧ್ಯಕ್ಷತೆಯನ್ನ ಕೊನಘಟ್ಟ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ವಹಿಸಲಿದ್ದಾರೆ ಎಂದು ಬಮುಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕು. ಮಿಶ್ರತಳಿ ಕರುಗಳ ಪ್ರದರ್ಶನಕ್ಕೆ ತಮ್ಮ ಕರುಗಳನ್ನ ಕರೆದುಕೊಂಡು ಬನ್ನಿ ಎಲ್ಲಾ ರೈತರಿಗೆ ಬಿ.ಸಿ ಆನಂದ್ ಕುಮಾರ್ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸ್ವಾತಂತ್ರ್ಯಕ್ಕಾಗಿ ಆರ್.ಎಸ್.ಎಸ್ ಕೊಡುಗೆ ಶೂನ್ಯ ಇದ್ದರೆ ಬಹಿರಂಗ ಪಡಿಸಲಿ: ಎನ್.ಅಂಬರೀಷ್

ಕೋಲಾರ: ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಆರ್.ಎಸ್.ಎಸ್ ಸಂಘಟನೆಯ ೧೦ ಮಂದಿ ಹೆಸರನ್ನು ಫೆ.೧೭ ರಂದು ಬೆಂಗಳೂರಿನ ಫ್ರೀಡಂ…

7 hours ago

ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ನೇಮಕ

ಬೆಂಗಳೂರು:ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಪಕ್ಷದ…

8 hours ago

ಶಾಲಾ ಅಡುಗೆ ಸಿಬ್ಬಂದಿ ಗೌರವ ಧನ ಹೆಚ್ಚಿಸಲು ಮುಷ್ಕರ, ಮನವಿ

ಗೌರವ ಧನ ಹೆಚ್ಚಿಸುವಂತೆ ಶಾಲಾ ಅಡುಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ…

10 hours ago

ಗ್ಯಾಸ್ ಗೀಸರ್ ಅನಿಲ ಸೋರಿಕೆಯಿಂದ ಪತಿ ಸಾವು: ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು: ನನ್ನ ಗಂಡನನ್ನ ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ ಎಂದು ಉಲ್ಲೇಖ

ನೆಲಮಂಗಲದಲ್ಲೋಂದು ಹೃದಯ ವಿದ್ರಾವಕ‌ ಘಟನೆ ನಡೆದಿದೆ. ಗಂಡ ಸಾವಿನ ಬೆನ್ನಲ್ಲೆ ಮನನೊಂದು ಹೆಂಡತಿ‌ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ರಾಜು,…

10 hours ago

ದಿಚಕ್ರ ವಾಹನ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದಿಚಕ್ರ ವಾಹನಕ್ಕೆ ಅಪಘಾತವಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪ…

14 hours ago

ಫೆ.8ರಂದು ತಾಲೂಕಿನ‌ ಹಲವು ಕಡೆ ವಿದ್ಯುತ್ ವ್ಯತ್ಯಯ: ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ಫೆ.8ರಂದು 220/66/115 ಕೆಐಏಡಿಬಿ 66/1182 ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ…

16 hours ago