ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಭಾನುವಾರ(ನಾಳೆ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಸೋಮವಾರ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭಾನುವಾರ ಸಂಜೆ 4 ಗಂಟೆಗೆ ನಡೆಯಲಿರುವ ಅಧಿಕ ಹಾಲು ಕರೆಯುವ ಸ್ಪರ್ಧೆ ಕಾರ್ಯಕ್ರಮ ಉದ್ಘಾಟನೆಗೆ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಆಗಮಿಸುತ್ತಿದ್ದಾರೆ. ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ, ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು, ಎಂಎಲ್ಸಿ ಎಸ್ ರವಿ, ಬಮುಲ್ ಉಪಾಧ್ಯಕ್ಷ ರಾಜಣ್ಣ, ಮಾಜಿ ಶಾಸಕ ವೆಂಕಟರಮಣಯ್ಯ, ಜೆಡಿಎಸ್ ಮುಖಂಡ ಬಿ.ಮುನೇಗೌಡ ಭಾಗಿಯಾಗಲಿದ್ದಾರೆ. ಅಧ್ಯಕ್ಷತೆಯನ್ನ ಕೊನಘಟ್ಟ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ವಹಿಸಲಿದ್ದಾರೆ ಎಂದು ಬಮುಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಮಾಡಬೇಕು. ಮಿಶ್ರತಳಿ ಕರುಗಳ ಪ್ರದರ್ಶನಕ್ಕೆ ತಮ್ಮ ಕರುಗಳನ್ನ ಕರೆದುಕೊಂಡು ಬನ್ನಿ ಎಲ್ಲಾ ರೈತರಿಗೆ ಬಿ.ಸಿ ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…