ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು ಆರತಿಗಳು ಸಂಜೆ 4 ಗಂಟೆಯ ನಂತರ ನಡೆಯಲಿದೆ. ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ನಡೆಯಲಿವೆ. ಮೇ 24ರಂದು ಹಗಲು ಪರಿಷೆ ನಡೆಯಲಿದೆ.
ಶಾಂತಿನಗರದ ಮುತ್ಯಾಲಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಗೋಪುರದ ಉದ್ಘಾಟನೆ, ಕುಂಭಾಭಿಷೇಕ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನೇರವೇರಿತು. ಕಳಸ ಸ್ಥಾಪನೆ, ದೇವಾಲಯದಲ್ಲಿ ಮುತ್ಯಾಲಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾ ಕುಂಭಾಭಿಷೇಕ, ಹೋಮ ಕಾರ್ಯಕ್ರಮಗಳು ನಡೆದವು.
ಈ ವೇಳೆ ರಾಜಗೋಪುರ ಸೇವಾಕರ್ತರಾದ
ಕೊರಟಗೆರೆ ಮಾಧುಸ್ವಾಮಿ ಕುಟುಂಬದವರು ಮತ್ತು ಭಕ್ತಾದಿಗಳು ಸೇರಿದಂತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಭಾಗಿಯಾಗಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…