ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು ಆರತಿಗಳು ಸಂಜೆ 4 ಗಂಟೆಯ ನಂತರ ನಡೆಯಲಿದೆ. ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ನಡೆಯಲಿವೆ. ಮೇ 24ರಂದು ಹಗಲು ಪರಿಷೆ ನಡೆಯಲಿದೆ.
ಶಾಂತಿನಗರದ ಮುತ್ಯಾಲಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಗೋಪುರದ ಉದ್ಘಾಟನೆ, ಕುಂಭಾಭಿಷೇಕ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನೇರವೇರಿತು. ಕಳಸ ಸ್ಥಾಪನೆ, ದೇವಾಲಯದಲ್ಲಿ ಮುತ್ಯಾಲಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾ ಕುಂಭಾಭಿಷೇಕ, ಹೋಮ ಕಾರ್ಯಕ್ರಮಗಳು ನಡೆದವು.
ಈ ವೇಳೆ ರಾಜಗೋಪುರ ಸೇವಾಕರ್ತರಾದ
ಕೊರಟಗೆರೆ ಮಾಧುಸ್ವಾಮಿ ಕುಟುಂಬದವರು ಮತ್ತು ಭಕ್ತಾದಿಗಳು ಸೇರಿದಂತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಭಾಗಿಯಾಗಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…