ನಾಳೆ ನಗರ ದೇವತೆ ಮುತ್ಯಾಲಮ್ಮ ತಾಯಿ ಜಾತ್ರಾ ಮಹೋತ್ಸವ

 

ನಗರ ದೇವತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಮೇ. 23ರಂದು ಮುತ್ಯಾಲಮ್ಮದೇವಿ ರಥೋತ್ಸವ ಬೆಳಿಗ್ಗೆ 11 ಗಂಟೆಗೆ ಮತ್ತು ಆರತಿಗಳು ಸಂಜೆ 4 ಗಂಟೆಯ ನಂತರ ನಡೆಯಲಿದೆ. ತಾಲ್ಲೂಕಿನ ದರ್ಗಾಜೋಗಿಹಳ್ಳಿ, ರೋಜಿಪುರ, ಕುರುಬರಹಳ್ಳಿ, ಶಾಂತಿನಗರ, ನಾಗಸಂದ್ರ, ಕೊಡಿಗೇಹಳ್ಳಿ, ರೋಜಿಪುರ ಸೇರಿದಂತೆ ನಗರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಸ್ಥರಿಂದ ನಡೆಯಲಿವೆ. ಮೇ 24ರಂದು ಹಗಲು ಪರಿಷೆ ನಡೆಯಲಿದೆ.

ರಾಜಗೋಪುರ ಉದ್ಘಾಟನೆ

ಶಾಂತಿನಗರದ ಮುತ್ಯಾಲಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಜಗೋಪುರದ ಉದ್ಘಾಟನೆ, ಕುಂಭಾಭಿಷೇಕ ಮಹೋತ್ಸವ ಸೋಮವಾರ ಅದ್ಧೂರಿಯಾಗಿ ನೇರವೇರಿತು. ಕಳಸ ಸ್ಥಾಪನೆ, ದೇವಾಲಯದಲ್ಲಿ ಮುತ್ಯಾಲಮ್ಮ ದೇವಿಗೆ ವಿಶೇಷ ಅಲಂಕಾರ, ಮಹಾ ಕುಂಭಾಭಿಷೇಕ, ಹೋಮ ಕಾರ್ಯಕ್ರಮಗಳು ನಡೆದವು.

ಈ ವೇಳೆ ರಾಜಗೋಪುರ ಸೇವಾಕರ್ತರಾದ
ಕೊರಟಗೆರೆ ಮಾಧುಸ್ವಾಮಿ ಕುಟುಂಬದವರು ಮತ್ತು ಭಕ್ತಾದಿಗಳು ಸೇರಿದಂತೆ ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ಟ್ರಸ್ಟ್ ಅಧ್ಯಕ್ಷ ಹನುಮಂತ, ಉಪಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ಹನುಮಂತರಾವ್, ಕಾರ್ಯದರ್ಶಿ ಪ್ರಭಾಕರ್, ಖಜಾಂಚಿ ಮಲ್ಲಣ್ಣ, ಡಿ.ಎನ್ ತಿಮ್ಮರಾಜು, ಅಪ್ಪಿ ವೆಂಕಟೇಶ್, ಜೆ.ಕುಮಾರ್, ಟ್ರಸ್ಟ್ ನ ಎಲ್ಲಾ ಸದಸ್ಯರು ಹಾಗೂ ಭಕ್ತಾದಿಗಳು ಭಾಗಿಯಾಗಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

9 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

12 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago